ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಯಾವುದೇ ಒಂದು ರಾಜ್ಯ, ಜಿಲ್ಲೆ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲಭೂತ ಸೌಕರ್ಯಗಳು ಇರಬೇಕಾದುದು ಅಗತ್ಯ. ಬಹುದಿನಗಳ ಈ ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಹಕಾರವೂ ಕೂಡ ಸ್ಮರಣೀಯವಾದುದು ಎಂದರು.

ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ಮನವಿ ಮಾಡಿದ ಅವರು, ನಿಲ್ದಾಣದ ಉದ್ಘಾಟನೆಗೆ ಜನವರಿ ಮಾಸಾಂತ್ಯದೊಳಗಾಗಿ ಪ್ರಧಾನಮಂತ್ರಿ ಅವರ ಸಮಯವನ್ನು ನಿಗಧಿಗೊಳಿಸಿಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದರು.

ಶಿವಮೊಗ್ಗ-ಬೆಂಗಳೂರು ಅಲ್ಲದೇ ನೆರೆ ರಾಜ್ಯಗಳ ಹಲವು ಪ್ರಮುಖ ನಗರಗಳ ಸಂಪರ್ಕ ಹಾಗೂ ಸಂಚಾರಕ್ಕೆ ಕ್ರಮ ವಹಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯದ ಉನ್ನತ ಅಧಿಕಾರಿಗಳ ತಂಡ ಸದ್ಯದಲ್ಲಿ ನೆರೆಯ ರಾಜ್ಯ ಮಹಾರಾಷ್ಟ್ರದ ಶಿರಡಿ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಪೂರ್ವಿಮಠ್, ರಾಜೀವ್‌ಕುಮಾರ್ ರೈ, ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹೆಚ್.ಆರ್.ರಾಜಪ್ಪ, ರೈಟ್ಸ್ ಸಂಸ್ಥೆಯ ಇಂಜಿನಿಯರ್ ರವಿ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಕೃಷ್ಣಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಕಾಂತರಾಜ್, ಸಂಪತ್‌ಕುಮಾರ್ ಮುಂತಾದ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆಯ ತಂತ್ರಜ್ಞರು, ಗುತ್ತಿಗೆದಾರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

16 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

19 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

19 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

19 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

20 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

2 days ago