ರಿಪ್ಪನ್ಪೇಟೆ;-ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದ್ದು ಸೆ.೧೩ ರಿಂದ ೨೩ ರವರೆಗೆ ಎರಡು ಮಂಗಳವಾರ ಎರಡು ಶುಕ್ರವಾರದೊಂದು ಜಾತ್ರೆ ಅಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಜೇನುಕಲ್ಲಮ್ಮ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.
ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಿತೃಪಕ್ಷದಲ್ಲಿ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಸೆಪ್ಟಂಬರ್ ೧೩ ಮತ್ತು ೧೬ ಹಾಗೂ ೨೦ ಮತ್ತು ೨೩ ಮಂಗಳವಾರ ಹಾಗೂ ಶುಕ್ರವಾರದೊಂದು ಈ ಜಾತ್ರಾಮಹೋತ್ಸವ ಜರುಗಲಿದೆ ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪಾಶೀರ್ವಾದ ಪಡೆದುಕೊಳ್ಳುವಂತೆ ಭಕ್ತರಲ್ಲಿ ಮನವಿ ಮಾಡಿದರು.
ಮಹಾಮಾರಿ ಕೊರೋನಾ ಹಿನ್ನೆಲೆಯಿಂದಾಗಿ ಕಳೆದ ಎರಡು ವರ್ಷದಿಂದ ಜಾತ್ರಾ ಮಹೋತ್ಸವ ರದ್ದುಗೊಂಡಿದ್ದು ಈ ಭಾರಿ ಜಾತ್ರೆಗೆ ಭಕ್ತರ ಸಂಖ್ಯೆ ಹೆಚ್ಚಾಗುವುದೆಂಬ ಅಶಾಭಾವನೆ ವ್ಯಕ್ತಪಡಿಸಿ ಬರುವ ಭಕ್ತರ ವಾಹನಗಳಿಗೆ ಪ್ರತ್ಯೇಕ ನಿಲುಗಡೆಗೆ ಜಾಗ ಮಾಡಲಾಗಿದೆ ಸ್ವಚ್ಚತೆ ದೃಷ್ಟಿಯಿಂದ ಮತ್ತು ಸಿಹಿತಿಂಡಿ ಮತ್ತು ಜಾತ್ರಾಮಹೋತ್ಸವದಲ್ಲಿ ಅಂಗಡಿ ಮುಂಗಟ್ಟುಗಳಿಗೆ ಸಹ ಜಾಗವನ್ನು ಕಾಯ್ದಿರಿಸಲಾಗಿದ್ದು ಸರ್ವರು ಸಹಕರಿಸುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಧರ್ಮದರ್ಶಿ ಸಮಿತಿಯ ಪ್ರಧಾನಕಾರ್ಯದರ್ಶಿ ಸುದೀರ್ಭಟ್ ,ಪ್ರಧಾನ ಅರ್ಚಕ ಭಾಸ್ಕರ್ಜೋಯ್ಸ್, ಹರೀಶ್ಕಲ್ಯಾಣಪ್ಪಗೌಡರು,ಸಂತೋಷ,ಶ್ರೀನಿವಾಸ್ ಕೆ.ಹೆಚ್.,
ರತ್ನಮ್ಮ,ಡಿ.ಕೆ.ಸರೋಜ,ಎ.ವಿ.ಮಲ್ಲಿಕಾರ್ಜುನ,ಉಸ್ಮಾನ್ ಸಾಬ್ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್