ಪೋಕ್ಸೋ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡ ಯುವಕ :

ಪೋಕ್ಸೋ‌ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ಮದನ ಕುಮಾರ್ (25) ಎಂಬಾತ ನಿನ್ನೆ ತನ್ನ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ.


ಮದನ್ ಕುಮಾರ್ ವಿರುದ್ದ ಅದೇ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂಬ ಆರೋಪದ ಮೇಲೆ ಪೋಕ್ಸೋ ಪ್ರಕರಣ ಕಳೆದ ಐದಾರು ವರ್ಷದ ಹಿಂದೆ ದಾಖಲಾಗಿತ್ತು. ನಂತರ ಮದನ ಕುಮಾರ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಕರಣದಲ್ಲಿ ಮದನ ಕುಮಾರ್ ಹಾಗೂ ಬಾಲಕಿ ಇಬ್ಬರು ಪ್ರೀತಿಸುತ್ತಿದ್ದರು, ಆದರೆ ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.



ಪೋಕ್ಸೋ ಪ್ರಕರಣದ ತೀರ್ಪು ಇಂದು: 


ಮದನ ಕುಮಾರ್ ಪೋಕ್ಸೋ ಪ್ರಕರಣದಲ್ಲಿ ನಿರ್ದೋಷಿ ಎಂದು ಇಂದು ಜಿಲ್ಲಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಆದರೆ ನಿನ್ನೆ ಮದನ್ ನೇಣಿಗೆ ಶರಣಾಗಿದ್ದಾನೆ. ಮೊನ್ನೆ ದಿನ ಮದನ್​ಗೆ ಪೋಕ್ಸೋ ಪ್ರಕರಣ ದಾಖಲಿಸಿದ ಬಾಲಕಿ ಫೋನ್ ಮಾಡಿ ಕರೆಯಿಸಿಕೊಂಡಿದ್ದಾಳೆ, ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಬಾಲಕಿ ಹೇಳಿದ್ದಳಂತೆ. ಮೊದಲು ಮದನ ನೇಣಿಗೆ ಶರಣಾಗಿದ್ದಾನೆ.‌ ಆದರೆ ಬಾಲಕಿ ನೇಣು ಹಾಕಿಕೊಳ್ಳದೇ ಮನೆಗೆ ಓಡಿ ಹೋಗಿದ್ದಾಳೆ ಎನ್ನಲಾಗಿದೆ.

ಡೆತ್ ನೋಟ್ ಲಭ್ಯ:

ಮದನ್ ತಾನು ನೇಣಿಗೆ ಶರಣಾಗುವ ಮುನ್ನಾ ಒಂದು ನೋಟ್ ಬರೆದಿಟ್ಟಿದ್ದು, ಇದರಲ್ಲಿ ತನ್ನೂರಿನ ಬಾಲಕಿಯ ಸಂಬಂಧಿಕರು ತಮಗೆ 25 ಲಕ್ಷ ರೂ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ನಾನು ಯಾವುದೇ ತಪ್ಪು‌ ಮಾಡಿಲ್ಲ, ಆದರೂ ಸಹ ತನಗೆ ಹಣ ನೀಡುವಂತೆ ಪೀಡಿಸುತ್ತಿದ್ದಾರೆ.‌ ಹಣ ನೀಡದೇ ಹೋದರೆ, ಕೊಲೆ‌ ಮಾಡುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

42 minutes ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

3 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

3 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

6 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

6 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

10 hours ago