Headlines

ಪೋಕ್ಸೋ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡ ಯುವಕ :

ಪೋಕ್ಸೋ‌ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ಮದನ ಕುಮಾರ್ (25) ಎಂಬಾತ ನಿನ್ನೆ ತನ್ನ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ.


ಮದನ್ ಕುಮಾರ್ ವಿರುದ್ದ ಅದೇ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂಬ ಆರೋಪದ ಮೇಲೆ ಪೋಕ್ಸೋ ಪ್ರಕರಣ ಕಳೆದ ಐದಾರು ವರ್ಷದ ಹಿಂದೆ ದಾಖಲಾಗಿತ್ತು. ನಂತರ ಮದನ ಕುಮಾರ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಕರಣದಲ್ಲಿ ಮದನ ಕುಮಾರ್ ಹಾಗೂ ಬಾಲಕಿ ಇಬ್ಬರು ಪ್ರೀತಿಸುತ್ತಿದ್ದರು, ಆದರೆ ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.



ಪೋಕ್ಸೋ ಪ್ರಕರಣದ ತೀರ್ಪು ಇಂದು: 


ಮದನ ಕುಮಾರ್ ಪೋಕ್ಸೋ ಪ್ರಕರಣದಲ್ಲಿ ನಿರ್ದೋಷಿ ಎಂದು ಇಂದು ಜಿಲ್ಲಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಆದರೆ ನಿನ್ನೆ ಮದನ್ ನೇಣಿಗೆ ಶರಣಾಗಿದ್ದಾನೆ. ಮೊನ್ನೆ ದಿನ ಮದನ್​ಗೆ ಪೋಕ್ಸೋ ಪ್ರಕರಣ ದಾಖಲಿಸಿದ ಬಾಲಕಿ ಫೋನ್ ಮಾಡಿ ಕರೆಯಿಸಿಕೊಂಡಿದ್ದಾಳೆ, ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಬಾಲಕಿ ಹೇಳಿದ್ದಳಂತೆ. ಮೊದಲು ಮದನ ನೇಣಿಗೆ ಶರಣಾಗಿದ್ದಾನೆ.‌ ಆದರೆ ಬಾಲಕಿ ನೇಣು ಹಾಕಿಕೊಳ್ಳದೇ ಮನೆಗೆ ಓಡಿ ಹೋಗಿದ್ದಾಳೆ ಎನ್ನಲಾಗಿದೆ.

ಡೆತ್ ನೋಟ್ ಲಭ್ಯ:

ಮದನ್ ತಾನು ನೇಣಿಗೆ ಶರಣಾಗುವ ಮುನ್ನಾ ಒಂದು ನೋಟ್ ಬರೆದಿಟ್ಟಿದ್ದು, ಇದರಲ್ಲಿ ತನ್ನೂರಿನ ಬಾಲಕಿಯ ಸಂಬಂಧಿಕರು ತಮಗೆ 25 ಲಕ್ಷ ರೂ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ನಾನು ಯಾವುದೇ ತಪ್ಪು‌ ಮಾಡಿಲ್ಲ, ಆದರೂ ಸಹ ತನಗೆ ಹಣ ನೀಡುವಂತೆ ಪೀಡಿಸುತ್ತಿದ್ದಾರೆ.‌ ಹಣ ನೀಡದೇ ಹೋದರೆ, ಕೊಲೆ‌ ಮಾಡುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




About The Author

Leave a Reply

Your email address will not be published. Required fields are marked *

Exit mobile version