ಬಂಧಿತರಾಗಿರುವ ಶಂಕಿತ ಉಗ್ರರದ್ದು ತೀರ್ಥಹಳ್ಳಿಯ ಮೂಲ ಹೌದು ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು : ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು.

ತೀರ್ಥಹಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂಧರ ಪರಿಚಯದಿಂದ ಈ ರೀತಿಯಾಗಿದೆ.ಬಂಧಿತ ಶಂಕಿತ ಉಗ್ರರಿಗೆ ಕರಾವಳಿ, ಕೇರಳ ಲಿಂಕ್ ಇದೆ. ಹೀಗಾಗಿಯೇ ಇಂತಹ ಕೃತ್ಯ ನಡೆಯುತ್ತಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಪೋನ್ ಬಳಕೆ ಸಹ ಆಗಿದೆ. ನಮ್ಮ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು.

ಈ ಹಿಂದೆ ದೀಪಾವಳಿಯಲ್ಲಿ ಪಟಾಕಿ ಹೊಡೆದ ಹಾಗೆ ಬಾಂಬ್ ಸ್ಪೋಟ ಆಗುತ್ತಿತ್ತು. ಇದೀಗ ಮೋದಿ ಅವರು ಬಂದ ನಂತರ ಇದೆಲ್ಲಾ ನಿಯಂತ್ರಣಕ್ಕೆ ಬರುತ್ತಿದೆ. ಇವರ ಹಿಂದೆ ಯಾವ ಯಾವ ಲಿಂಕ್ ಇದೆ? ಏನಿದೆ? ಎಂಬಿತ್ಯಾದಿ ಎಲ್ಲಾ ಆಯಂಗಲ್ ನಲ್ಲಿ ತನಿಖೆ ಆಗುತ್ತಿದೆ. ಎನ್‌ಐಎ ಟೀಂ ಸಹ ಈಗಾಗಲೇ ಬಂದಿದೆ ಎಂದರು.

ಎನ್​ಐಎ ದಾಳಿ ಸಂಬಂಧ ಮಾತನಾಡಿದ ಆರಗ ಜ್ಞಾನೇಂದ್ರ, ಪೊಲೀಸರು 15 ಜನರನ್ನು ಬಂಧಿಸಿದ್ದಾರೆ, ಎನ್​ಐಎ 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಯಾರು ಯಾರಿಗೆ ಯಾವ ಯಾವ ಆಯುಧ ಬಳಸಬೇಕೋ? ಯಾರು ಯಾರಿಗೆ ಯಾವ ಭಾಷೆ ಬಳಸಬೇಕೋ ಅದನ್ನ ಬಳಸಬೇಕಾಗುತ್ತದೆ. ಈ ಹಿಂದೆ ಯುಎಪಿಎ ಕೇಸ್ ಹಾಕಿದಾಗ ಅನವಶ್ಯಕವಾಗಿ ಹಾಕ್ತಿದ್ದಾರೆ ಎನ್ನುತ್ತಿದ್ದರು. ಈಗ ಏನಾಯ್ತು, ಇಂತಹ ಪ್ರಕರಣ ಬೆಳಕಿಗೆ ಬಂತು. ಇವರ ಮುಖ ನೋಡಿದರೆ, ಹಿನ್ನೆಲೆ ನೋಡಿದರೆ ಏನು ಅಲ್ಲ ಅನ್ಸುತ್ತೆ. ಆದರೆ ಮತಾಂಧತೆಗೆ ಒಳಗಾದಾಗ ಇಂತಹ ಕೃತ್ಯ ನಡೆಯುತ್ತದೆ. ಅಮೂಲಾಗ್ರವಾದ ಪರಿಶೀಲನೆ ನಡೆಯುತ್ತಿದೆ. ಪೊಲೀಸರಿಗೆ ಎಲ್ಲಾ ರೀತಿಯ ಜಾಡು ಸಿಗುತ್ತಿದೆ. ನಮ್ಮ ಸರಕಾರ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ನೀಡಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಪೊಲೀಸರು ಈ ರೀತಿ‌ ಕೆಲಸ ಮಾಡಲು ಆಗುತ್ತಿರಲಿಲ್ಲ. ನಮ್ಮ ಸರಕಾರ ಪೊಲೀಸರ ಕೆಲಸದಲ್ಲಿ ಮೂಗು ತೂರಿಸಲು ಹೋಗುವುದಿಲ್ಲ ಎಂದು ಹೇಳಿದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

17 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

19 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

20 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

20 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

21 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

2 days ago