ಭರ್ಜರಿ 20 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ವಿಸರ್ಜನೆ :


ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಶಾಂತಿಯುತವಾಗಿ ನೆರವೇರಿದೆ.


ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 20 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ನಿನ್ನೆ ಸಂಜೆ 4.30 ಕ್ಕೆ ಆರಂಭವಾಗಿದ್ದ ಮೆರವಣಿಗೆ ಇಂದು ಮಧ್ಯಾಹ್ನ12.30 ಕ್ಕೆ ಕೊನೆಗೊಂಡು ವಿಸರ್ಜನೆ ನೆರವೇರಿತು.


ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಸಾವಿರಾರು ಭಕ್ತಾದಿಗಳು ಮೆರವಣಿಗೆಯಲ್ಲಿ ಭಾಗಿಯಾದರು.ಚಿಕ್ಕ ಮಕ್ಕಳಿನಿಂದ ಹಿಡಿದು ವಯೋವೃದ್ದರು ,ಮಹಿಳೆಯರು ಪಾಲ್ಗೊಂಡರು.

ಪಟ್ಟಣದ ಹೊಸನಗರ ರಸ್ತೆಯಲ್ಲಿನ ತಾವರೆಕೆರೆಯಲ್ಲಿ ಗಣಪತಿಯ ವಿಸರ್ಜನೆ ಮಾಡಲಾಯಿತು.


ನೂರಾರು ಪೊಲೀಸ್ ಬಿಗಿ ಬಂದೋಬಸ್ತ್ ಪಟ್ಟಣದಾದ್ಯಂತ ಮಾಡಲಾಗಿತ್ತು.ಡಿವೈಎಸ್ಪಿ ಶಾಂತಕುಮಾರ್ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.ಸಿಪಿಐ ಗಿರೀಶ್ ನೇತ್ರತ್ವದಲ್ಲಿ ಬಂದೋಬಸ್ತ್ ನಡೆದಿತ್ತು.ತಹಶೀಲ್ದಾರ್ ವಿ ರಾಜೀವ್ ಮೆರವಣಿಗೆಯುದ್ದಕ್ಕೂ ಪಾಲ್ಗೊಂಡು ಅವಲೋಕಿಸಿದರು.

ಈ ನಡುವೆ ಮೆರವಣಿಗೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದರು.ಬೇಳೂರು ಕುಣಿತಕ್ಕೆ ಯುವಕರು ಸಾಥ್ ನೀಡಿದರು.ಕಾಂಗ್ರೆಸ್ ನ ಸ್ಥಳೀಯ ನಾಯಕರು ಜೊತೆಯಲ್ಲಿದ್ದರು.

ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಗಣೇಶೋತ್ಸವ ಸಮಿತಿ ಅಧ್ಯಕ್ಷ ವೈ.ಜೆ.ಕೃಷ್ಣ,ಸಿದ್ದಿವಿನಾಯಕ ದೇವಸ್ಥಾನದ ಧರ್ಮದರ್ಶಿ ಅರ್.ಈ.ಈಶ್ವರಶೆಟ್ಟಿ,ಪ್ರಧಾನಕಾರ್ಯದರ್ಶಿ ಪಿ.ಸುದೀರ್,ಎಂ.ಬಿ.ಮಂಜುನಾಥ,.ಸುರೇಶ್‌ಸಿಂಗ್,ಸುದೀಂದ್ರಪೂಜಾರಿ,ತೀರ್ಥೇಶ್‌ ಅಡಿಕಟ್ಟು,ರವೀಂದ್ರಕೆರೆಹಳ್ಳಿ, ಆರ್.ರಾಘವೆಂದ್ರ,ಶ್ರೀನಿವಾಸ್ ಅಚಾರ್,ಎನ್.ಸತೀಶ್,ಗಣೇಶ್ ಎನ್.ಕಾಮತ್,ಆರ್.ಹೆಚ್.ಶ್ರೀನಿವಾಸ ಅಚಾರ್,ಅಟೋ ಲಕ್ಷಣ,ಎಂ.ಡಿ.ಇಂದ್ರಮ್ಮ,ಜಯಲಕ್ಷಿö್ಮಮೋಹನ್, ಅರ್.ಡಿ.ಶೀಲ,ಅರ್.ಶೈಲಪ್ರಭು,,ಹೆಚ್.ಎನ್.ಚೋಳರಾಜ್,ಡಿ.ಈ.ರವಿಭೂಷಣ,ಎಸ್.ದಾನಪ್ಪ,ನಾಗರಾಜ್ ಪವಾರ್,ತುಳೋಜಿರಾವ್, ಮುರುಳಿ, ಕೆ.ವಿ.ಲಿಂಗಪ್ಪ,ಭೀಮರಾಜ್, ವಾಸುಶೆಟ್ಟಿ,ಕೆ.ಎ.ನಾರಾಯಣ, ಶಾಂತಕುಮಾರ,ಯೋಗೇಶ್,ಪುಟ್ಟರಾಜ್, ಸ್ವಾಮಿದೊಡ್ಡಿನಕೊಪ್ಪ,ಹೆಚ್.ಎನ್.ಉಮೇಶ್,ದೇವರಾಜ್ ಪವಾರ್,ಇನ್ನಿತರ ಹಲವರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಉಪತಹಶೀಲ್ದಾರ್ ಹುಚ್ಚರಾಯಪ್ಪ,ಪಿಎಸ್‌ಐ ಶಿವಾನಂದಕೋಳಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿವರ್ಗ ಗ್ರಾಮ ಪಂಚಾಯ್ತಿ ಪಿಡಿಓ ಸಿಬ್ಬಂದಿವರ್ಗ ಇನ್ನಿತರ ಇಲಾಖೆಯ ಅಧಿಕಾರಿಗಳು ಗಣಪತಿ ಮೆರವಣಿಗೆ ಹಿನ್ನಲೇಯಲ್ಲಿ ಪೊಲೀಸ್ ಇಲಾಖೆ ಗೃಹ ರಕ್ಷಕ ದಳ ಪಟ್ಟಣದ ಎಲ್ಲೇಡೆ ಬಿಗಿ ಬಂದೋಬಸ್ತುನೊಂದಿಗೆ ಸಿಸಿಟಿವಿ ಡ್ರೋಣ್ ಕ್ಯಾಮರಗಳಲ್ಲಿ ಹಾಗೂ ಮೆರವಣಿಗೆ ಪ್ರತಿ ಹಂತದಲ್ಲಿ ಸೂಕ್ತ ಪರಿಶೀಲನೆ ನಡೆಸಿದರು.

ಗಣಪತಿ ವಿಸರ್ಜನೆಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇





ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಭೇಟಿಯ ವೀಡಿಯೋ ಇಲ್ಲಿ ವೀಕ್ಷಿಸಿ👇



ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದ ಬೇಳೂರು ಗೋಪಾಲಕೃಷ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇



ಬೃಹತ್ ಬೈಕ್ ರ್ಯಾಲಿ ಯ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! - ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 hour ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

9 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

22 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago