ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ
ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು
ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು
ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ
ಕೇಳುವ ದುಸ್ಥಿತಿ ನಿರ್ಮಾಣವಾಗಿದೆ.




ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಾಗಿ ಆರಂಭಗೊಂಡ ಚಿಕ್ಕಜೇನಿ ಶಾಲೆ ನಂತರದ ವರ್ಷದಲ್ಲಿ ಸ್ವತಂತ್ರ ಸರ್ಕಾರಿ ಪ್ರೌಢಶಾಲೆಯಾಗಿ 8 ರಿಂದ ಎಸ್.ಎಸ್.ಎಲ್.ಸಿ ವರೆಗೆ 115 ವಿದ್ಯಾರ್ಥಿಗಳಿದ್ದು ಮುಖ್ಯೋಪಾದ್ಯಾಯರು ಸೇರಿದಂತೆ 8 ಜನ ಶಿಕ್ಷಕ ವರ್ಗ ಐದು ಕೊಠಡಿಗಳು ಇದ್ದರೂ ಎಲ್ಲಾ ಕಟ್ಟಡಗಳು ಕಾಮಗಾರಿ ಹಂತದಲ್ಲಿಯೇ ಕಳಪೆ ಗುಣಮಟ್ಟದಿಂದಾಗಿ ಸಂಪೂರ್ಣ ಶಿಥಿಲಾವಸ್ಥೆಯಿಂದಾಗಿ ಮಳೆಗಾಲದಲ್ಲಿ ಮಳೆನೀರು ಕಟ್ಟಡದೊಳಗೆ ಇಳಿಯುವಂತಾಗಿ ವಿದ್ಯಾರ್ಥಿಗಳು ಪಾಠ ಪ್ರವಚನದ ವೇಳೆ ಛತ್ರಿ ಹಿಡಿದುಕೊಂಡು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ.

ಅಲ್ಲದೆ ಶಿಕ್ಷಕರ
ಕೊಠಡಿಯಲ್ಲಿನ ಸ್ಲಾಬ್ ಪಿಲ್ಲರ್ ಸಂಪೂರ್ಣ ನಾದುರಸ್ತಾಗಿದ್ದು
ಅಗತ್ಯ ದಾಖಲೆಗಳು ನೀರಿನಲ್ಲಿ ಹಾಳಾಗಿ ಹೋಗುತ್ತಿದ್ದು
ಸುರಕ್ಷತವಾಗಿ ಇಡಲು ಶಿಕ್ಷಕವರ್ಗ ಹರಸಹಾಸ
ಪಡುವಂತಾಗಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಶಾಲೆಗೆ ಭೇಟಿ ನೀಡಿದ
ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರದಾಟವನ್ನು ಕಂಡು
ಕೇಳಿದಾಗ ಯಾರು ಸಾರ್ ನಮ್ಮ ಕಷ್ಟ ಕೇಳೋರೋ
ಶಾಸಕರು ಇಲ್ಲ ಅಧಿಕಾರಿಗಳು ಬರೋಲ್ಲ ಯಾರ ಹತ್ತಿರ
ಹೇಳಿಕೊಳ್ಳೊದು ನಮ್ಮ ಕಷ್ಟ…! ಎಂದು ತಮ್ಮ
ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಾರೆ



ಯಾವುದೇ ಸಂದರ್ಭದಲ್ಲಿ ಅಪಾಯ
ಸಂಭವಿಸುವ ಕಾಲದೂರವಿಲ್ಲ ಅದ್ದರಿಂದಾಗಿ ತಕ್ಷಣ ಈ
ಕಟ್ಟಡದಲ್ಲಿ ತರಗತಿಗಳನ್ನು ನಡೆಸದಂತೆ ಕ್ರಮ ವಹಿಸುವಲ್ಲಿ
ಮುಂದಾಗಬೇಕಾಗಿದೆ.

ಇನ್ನಾದರೂ ರಾಜ್ಯದ ಶಿಕ್ಷಣ ಸಚಿವ ನಾಗೇಶ್ ಮತ್ತು
ಸರ್ಕಾರ ಹಾಗೂ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು
ಗಮನಹರಿಸುವರೇ……………..?

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 hour ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

1 hour ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

4 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

4 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

7 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

7 hours ago