ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.


ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ ಬ್ಯಾಗ್ ವಿತರಣೆ ಸೇರಿದಂತೆ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಿಸುವ ಕಾರ್ಯಕ್ರಮದೊಂದಿಗೆ ಅಕ್ಟೋಬರ್ 1 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ಪುರುಷರ `ವಾಲಿಬಾಲ್’ಪಂದ್ಯಾವಳಿ ಹಾಗೂ ಮಾರುತಿಪುರ ಕಾನುಗೋಡುನಲ್ಲಿ ಅರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ರೈತ ಮೋರ್ಚ ಆಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ  ತಿಳಿಸಿದರು.

ಹೊಂಬುಜದ ಅಂಬೇಡ್ಕರ್  ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಕ್ಟೋಬರ್ 1 ರಂದು ಶನಿವಾರ ಬೆಳಗ್ಗೆ 11 ಕ್ಕೆ ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸುವರು.ಮುಖ್ಯ ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್,ಎಂ.ಎಲ್.ಸಿ.ಎಸ್.ರುದ್ರೇಗೌಡರು, ಭಾರತಿಶೆಟ್ಟಿ,ಡಿ.ಎಸ್.ಅರುಣ್,ರೈತ ಮೋರ್ಚ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ದಿನೇಶ್ ದೇವವೃಂದ,ರಾ.ರೈ.ಮೋ.ಉಪಾಧ್ಯಕ್ಷೆ ಮಂಜುಳ,.ಬಿ.ಕೆ.ಶ್ರೀನಾಥ,ಭಾಗವಹಿಸುವರು ಎಂದರು.

ಸಮಾರೋಪ ಸಮಾರಂಭ :

ಜಿಲ್ಲಾ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಸಂಜೆ 7 ಗಂಟೆಗೆ ನಡೆಯಲಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅಧ್ಯಕ್ಷತೆ ವಹಿಸುವರು.

ರಾಜ್ಯ ರೈತ ಮೋರ್ಚ ಅಧ್ಯಕ್ಷ ಹಾಗೂ ರಾಜ್ಯಸಬಾ ಸದಸ್ಯ ಈರಣ್ಣ ಕಡಾಡಿ ಸಮಾರೋಪ ಭಾಷಣ ಮಾಡುವರು.ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ,ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ,ಸಂಸದ ಬಿ.ವೈ.ರಾಘವೇಂದ್ರ,ಮಾ.ಸ.ಕೆ.ಎಸ್.ಈಶ್ವರಪ್ಪ,ಶಾಸಕ ಹರತಾಳು ಹಾಲಪ್ಪ,ಕುಮಾರ ಬಂಗಾರಪ್ಪ,ಆಶೋಕ್‌ನಾಯ್ಕ್,ಭಾನುಪ್ರಕಾಶ್, ಆರ್.ಕೆ.ಸಿದ್ದರಾಮಣ್ಣ,ತಾ.ಬಿ.ಜೆ.ಪಿ.ಆ.ಗಣಪತಿ
ಬೆಳಗೋಡು, ರಾಘವೇಂದ್ರ, ಬಾಳೆಬೈಲು,ನಾಗರಾಜ್‌ಗೌಡ,ಬಿಜೆಪಿ ಮ.ಶ.ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಹುಂಚ ಗ್ರಾಪಂ ಅಧ್ಯಕ್ಷೆ ಪಲ್ಲವಿ ಇನ್ನಿತರ ಮುಖಂಡರು ಭಾಗವಹಿಸುವರು ಎಂದು ಸಾಲೆಕೊಪ್ಪ ರಾಮಚಂದ್ರ ಸುದ್ದಿಗೋಷ್ಟಿಯಲ್ಲಿ ವಿವರಿಸಿ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವುದಾಗಿ ತಿಳಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕ್ ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು,
ರಿಪ್ಪನ್‌ಪೇಟೆ-ಹುಂಚಾ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ನಾಗೇಂದ್ರ ಕಲ್ಲೂರು ,ಕುಕ್ಕೆ ಪ್ರಶಾಂತ, ಯದುವೀರ, ಗಿರೀಶ್ ಜಂಬಳ್ಳಿ,ತೀರ್ಥೇಶ್, ಮಹೇಶ ಕಟ್ಟೆ,ಅರುಣ್‌ಕುಮಾರ್ ನಿಟ್ಟೂರು,ನಜೀರ್‌ಸಾಬ್,ನಟೇಶ್,ಶ್ರೀಧರ,ಅಭಿಷೇಕ್ ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

44 minutes ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

53 minutes ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

4 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

4 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

8 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

8 hours ago