ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ.


AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್  ಸೀಮಾ ವಿಕಾಸ್ ಗಾಡಿಯಾ ರವರು ಶಶಿಕಲಾ ಕೆ ಎನ್ ರವರಿಗೆ ವಿತರಿಸಿದರು.

ಶಶಿಕಲಾ ಕೆ ಎನ್ ರವರು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿಯಾಗಿದ್ದು ಇವರ ಪತಿ ಸುರೇಶ್ ಕೂರಂಬಳ್ಳಿ ಶಿಕ್ಷಕ ವೃತ್ತಿಯಲ್ಲಿದ್ದಾರೆ.


ಇಡೀ ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಗುರುತಿಸಿ AIWAA ಸಂಸ್ಥೆ ಪ್ರಶಸ್ತಿಯನ್ನು ನೀಡುತ್ತ ಬಂದಿದೆ. ಮೇಕಪ್ ತರಬೇತಿ ನೀಡುವ ಮೂಲಕ ನೂರಾರು ಮಹಿಳೆಯರಿಗೆ ಸ್ವಾವಲಂಬಿ ಬದುಕಿಗೆ ಅವಕಾಶ ಮಾಡಿ ಕೊಟ್ಟ ಶಶಿಕಲಾ ಕೆ ಎನ್ ಅವರಿಗೆ ಈ ಸಾಲಿನ ಈ ಪ್ರಶಸ್ತಿ ದೊರೆತಿದೆ.


ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಶಶಿಕಲಾ ಕೆ ಎನ್ ರವರು ಎಐಡಬ್ಲ್ಯೂಎಎ ಅವರು ನನ್ನ ಶ್ರಮವನ್ನು ಗುರುತಿಸಿರುವುದು ನನಗೆ ಬಹಳ ಸಂತೋಷ ತಂದಿದೆ. ನಾನು ಕಳೆದ ಹಲವು ವರ್ಷಗಳಿಂದ ಸಲ್ಲಿಸಿದ ಸೇವೆಗೆ ಸಂದ ಬಹುಮಾನ ಇದು, ಇದು ಕೇವಲ ನನಗೆ ಸಂದ ಬಹುಮಾನವಲ್ಲ, ಜಿಲ್ಲೆಯ ಎಲ್ಲ ಸ್ತ್ರೀಯರಿಗೆ ಸಂದ ಬಹುಮಾನ, ಮಹಿಳೆಯರು ತಮಗಿರುವ ಅವಕಾಶಗಳನ್ನು ಬಳಸಿಕೊಂಡು ಸಾಧನೆಗೆ ಮುಂದಾಗಬೇಕೆಂಬುವುದೇ ನನ್ನ ಮನವಿ ಎಂದರು.

ಗ್ರಾಮೀಣ ಪ್ರದೇಶದ ಮಹಿಳೆಯೊಬ್ಬರು ಅಂತರಾಷ್ಟ್ರೀಯ ಸಂಸ್ಥೆ ಗುರುತಿಸುವಂತಹ ಸಾಧನೆಗೈದಿರುವುದಕ್ಕೆ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago