ರಿಪ್ಪನ್‌ಪೇಟೆ : ಕಾಮಗಾರಿ ಹಂತದಲ್ಲಿ ಕಿತ್ತು ಹೋದ ಬರುವೆ ಬಡಾವಣೆಯಲ್ಲಿನ ಕಾಂಕ್ರೀಟ್ ಸಂಪರ್ಕ ರಸ್ತೆ | ಇದು 40% ಅಲ್ಲಾ..!!! 60% ಕಮಿಷನ್ ನ ಕಾಮಗಾರಿಯೇ…??????

ರಿಪ್ಪನ್‌ಪೇಟೆ : ವಿಧಾನ ಪರಿಷತ್ ಸದಸ್ಯರಾಗಿದ್ದ ಆರ್ ಪ್ರಸನ್ನ ಕುಮಾರ್
ಅವಧಿಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಹೊಸಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಸರ್ಕಾರದಿಂದ ಕರ್ನಾಟಕ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಹಂತದಲ್ಲಿ ಸಂಪೂರ್ಣ ಕಿತ್ತು ಹೋಗಿ ಸಾರ್ವಜನಿಕರಲ್ಲಿ ಹಾಸ್ಯದ ವಿಷಯವಾಗಿ ಸುದ್ದಿಗೆ ಗ್ರಾಸವಾಗಿದೆ.


ಶೇಕಡಾ 40% ಪರ್ಸೆಂಟ್‌ನ ರಾಜ್ಯ ಬಿಜೆಪಿ ಸರ್ಕಾರ ಎಂದು ಬೀಗುತ್ತಿರುವ ವಿರೋಧಪಕ್ಷದವರು ತಮ್ಮ ಪಕ್ಷದ ಅಗಿನ ಎಂ.ಎಲ್.ಸಿ, ಅನುದಾನದಡಿ ಬಿಡುಗಡೆ ಮಾಡಲಾದ ಹೊಸಬಡಾವಣೆಯ  ಕಾಂಕ್ರೇಟ್  ರಸ್ತೆ ಕಾಮಗಾರಿ ಅಪೂರ್ಣ ಮತ್ತು ಕಳಪೆ ಗುಣಮಟ್ಟದಿಂದಾಗಿ ಸಂಪೂರ್ಣ ಕಿತ್ತು ಹೋಗಿದೆ.ಹೊಸಬಡಾವಣೆಯಲ್ಲಿನ ನಿವಾಸಿಗಳಾದ ಗಂಗಾಧರ.ಸುರೇಂದ್ರ ಶೆಟ್ಟಿ ಇನ್ನಿತರರು ಕಾಮಗಾರಿ ಹಂತದಲ್ಲಿಯೇ ಕಿತ್ತು ಹೋಗಿರುವ ಕಾಂಕ್ರೇಟ್  ರಸ್ತೆ  ಮತ್ತು ಬಾಕ್ಸ್  ಚರಂಡಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಮತ್ತು ಕ್ಯೂರಿಂಗ್ ಸಹ ಮಾಡಿರುವುದಿಲ್ಲ ಎಂದು ತಮ್ಮ ಆಕ್ರೊಶವನ್ನು ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಗ್ರಾಮ ಪಂಚಾಯ್ತಿ ಪಿಡಿಓ ಮತ್ತು ಗ್ರಾಮಾಧ್ಯಕ್ಷರ ಗಮನಕ್ಕೆ ತರಲಾಗಿದ್ದು ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಈ ಹಿಂದಿನ ಎಂ.ಎಲ್.ಸಿ.ಆರ್.ಪ್ರಸನ್ನ ಕುಮಾರ್ ಅನುದಾನದಡಿ ಕಾಮಗಾರಿ ನಿರ್ವಹಿಸಿರುವುದು ಎಂದು ಹೇಳಿ ಸಾಗಹಾಕುತ್ತಿದ್ದಾರೆ.ಕಾಮಗಾರಿ ಮಾಡಿ ತಿಂಗಳಲ್ಲಿ ಕಿತ್ತು ಹೋಗಿರುವುದು ಸಾರ್ವಜನಿಕರ ಮತ್ತು ಬಡಾವಣೆಯ ನಿವಾಸಿಗಳಲ್ಲಿನ ಅಕ್ರೋಶಕ್ಕೆ ಕಾರಣವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

3 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

20 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

22 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

23 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

23 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

23 hours ago