ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ ದಾಖಲಿಸಲಾಗಿದೆ.
ಮೆಗ್ಗಾನ್ ನಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅನುಷಾ ಅಸುನೀಗಿದ್ದಾಳೆ. ಅನುಷ (18) ಕೂಲಿ ಕೆಲಸ ಮಾಡಿಕೊಂಡಿದ್ದು, 8 ನೇ ತರಗತಿ ಓದಿಕೊಂಡಿದ್ದಾಳೆ. ನೆವಟೂರು ಗ್ರಾಮದ ಮಂಜುನಾಥ್ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನು.
ಮೂರು ತಿಂಗಳ ಹಿಂದೆ ಹುಡುಗಿ ಅಣ್ಣನ ಮನೆಗೆ ಗಾರೆಕೆಲಸಕ್ಕೆ ಹೋಗಿದ್ದ ಮಂಜುನಾಥ್ ನಿಗೆ ಅನುಷಾ ಪರಿಚಯವಾಗಿದ್ದಾಳೆ. ಪರಿಚಯ ಪ್ರೀತಿಗೆ ತಿರುಗಿದೆ. ಇಬ್ಬರು ಫೋನ್ ನಂಬರ್ ಪಡೆದುಕೊಂಡಿದ್ದ ಜೋಡಿಹಕ್ಕಿಗಳು ಮದುವೆಯ ವಿಚಾರದಲ್ಲಿ ಜಗಳವಾಡಿಕೊಂಡಿದ್ದಾರೆ.
ಮೊಬೈಲ್ ನಲ್ಲಿಯೇ ಜೋರು ಜೋರು ಮಾತನಾಡುತ್ತಿದ್ದ ಯುವತಿ ಹುಡುಗ ಮದುವೆ ವಿಚಾರದಲ್ಲಿ ಒಪ್ಪಿಕೊಳ್ಳದ ಕಾರಣ ಯುವತಿ ವಿಷ ಸೇವಿಸಿರುವುದಾಗಿ ತಂದೆ ಬಂಗಾರಪ್ಪ ದೂರು ದಾಖಲಿಸಿದ್ದಾರೆ.
ನಿನ್ನೆ ಯುವತಿಯನ್ನ ಮೆಗ್ಗಾನ್ ಗೆ ದಾಖಲಿಸುವವರೆಗೂ ಜೊತೆಗೆ ಇದ್ದ ಯುವಕ ಇಂದು ಬೆಳಿಗ್ಗೆ 7 ಗಂಟೆಗೆ ಯುವತಿ ಪ್ರಾಣ ಬಿಟ್ಟಾಗಿನಿಂದ ನಾಪತ್ತೆಯಾಗಿದ್ದಾನೆ.
ಮದುವೆಯಾಗಲು ಒಪ್ಪದ ಯುವಕನ ಕಿರುಕುಳದಿಂದ ಬೇಸತ್ತು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್