ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಹೇಳಿದರು.


ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ಕಛೇರಿಯಲ್ಲಿ  ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ  ದೇಶದ ಹಾಗೂ ರಾಜ್ಯದ ಹಿತ ದೃಷ್ಟಿಯಿಂದ ಜನ ಹಿತ ಸರಕಾರದ ಅವಶ್ಯಕತೆ ಇದೆ. ಈ ಬಗ್ಗೆ ರಾಷ್ಟ್ರದ ಹಾಗೂ ರಾಜ್ಯದ ನಾಗರಿಕರು ಗಮನ ಹರಿಸಬೇಕು.ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದರು
ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ ರಾಜ್ಯದಲ್ಲಿ ಮೂರು ಪಕ್ಷಗಳು ರಾಜ್ಯವನ್ನು ಲೂಟಿಮಾಡುತ್ತಿದ್ದಾರೆ. ಇನ್ನುಮುಂದೆ ನಾವು ಅವಕಾಶಕೊಡುವುದಿಲ್ಲ. ಕೇಜ್ರಿವಾಲ್‌ರವರು ನಮ್ಮ ಕೈಗೆ ಪೊರಕೆಕೊಟ್ಟಿದ್ದಾರೆ ಎಲ್ಲಾ ಕಸವನ್ನು ಗುಡಿಸಿ ಹಾಕುತ್ತೇವೆ ಎಂದರು.

ಕರ್ನಾಟಕ ಭೌಗೋಳಿಕವಾಗಿ ವಿಭಿನ್ನ ನೆಲೆಗಟ್ಟನ್ನು ಹೊಂದಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ವಿಭಿನ್ನ ಸಮಸ್ಯೆಗಳು, ಸವಾಲುಗಳಿವೆ. ಹಾಗಾಗಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಅದು ಬರೀ ಪ್ರಣಾಳಿಕೆಯಲ್ಲ. ಗ್ಯಾರಂಟಿ ಕಾರ್ಡ್ ಇದ್ದಂತೆ. ಅದರಲ್ಲಿ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಅವರ ಸಹಿ ಇರಲಿದ್ದು ಭರವಸೆ ಈಡೇರಿಸದೇ ಇದ್ದರೆ ಜನಸಾಮಾನ್ಯರು ಕಾನೂನು ಹೋರಾಟ ಮಾಡಬಹುದು. ನಾವು ಎಸಿ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಿಲ್ಲ. ಕೊಟ್ಟ ಭರವಸೆ ಈಡೇರಿಸುವುದು ನಮ್ಮ ಜವಾಬ್ದಾರಿ ಆಗಿರಲಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ದರ್ಶನ್ ಜೈನ್,ಆಶ್ರಿತಾ ಸಂತೋಷ,ಹಸನಬ್ಬ
ಈಶ್ವರಪ್ಪ ಕುಕ್ಕಳಲೆ,ಕಿರಣ್. ಕೆ.  ರವಿ ಇನ್ನಿತರರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago