ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ.
ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು.
ಅಪ್ಪು ಕೇವಲ ಕರ್ನಾಟಕದ ಜನರ ಪ್ರೀತಿಯನ್ನು ಮಾತ್ರವಲ್ಲದೇ ಜಗತ್ತಿನ ಎಲ್ಲಾ ದೇಶಗಳ ಜನರ ಪ್ರೀತಿ ಗಳಿಸಿದ್ದರು. ಅವರ ನೆನಪು ಇಂದಿಗೂ ದೂರವಾಗುತ್ತಿಲ್ಲ. ಹಾಗಾಗಿಯೇ ನೆಚ್ಚಿನ ನಾಯಕನ ಚಿತ್ರವನ್ನು ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರದ ಪ್ರದೇಶದಲ್ಲಿ ಹಾರಿಸಬೇಕು ಎಂದು ಸ್ನೇಹಿತರೆಲ್ಲರೂ ಸೇರಿ ಈ ಪ್ರವಾಸ ಕೈಗೊಂಡಿದ್ದೇವೆ ಎಂಬುದು ವಿನಯ್ ಹೇಳಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್