ರಿಪ್ಪನ್ಪೇಟೆ : ಬಿಎಂಎಸ್ ಶಿಕ್ಷಣ ಟ್ರಸ್ಟ್ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಕಾರಣ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ರಾಜೀನಾಮೆ ಜತೆಗೆ ಈ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೀರ್ಥಹಳ್ಳಿ ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರಾದ ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ಅಶ್ವಥ್ ನಾರಾಯಣ ಅವರು ಎಚ್ಚರಿಯಿಂದಿರಬೇಕು.ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಶಿವಮೊಗ್ಗಕ್ಕೆ ಅವರು ಬಂದಾಗ ಅವರ ಧಾಟಿಯಲ್ಲಿಯೇ ಉತ್ತರ ನೀಡಬೇಕಾಗುತ್ತದೆ.ನೋಡಲು ಸೌಮ್ಯ ಸ್ವಭಾವದ ಹಾಗೇ ಕಾಣುವ ಅಶ್ವಥ್ ನಾರಾಯಣ್ ರವರ ಸ್ವಭಾವ ವ್ಯಾಘ್ರ ಮನಸ್ಥಿತಿಯಲ್ಲಿದೆ.
ಈ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದ ಮತ್ತು ಕುಮಾರಸ್ವಾಮಿಯ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಅವರ ವಿರುದ್ದ ಜಿಲ್ಲಾದ್ಯಾಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂತರ ಮಾತನಾಡಿದ ಜೆಡಿಎಸ್ ರಾಜ್ಯ ಮುಖಂಡ ಅರ್ ಎ ಚಾಬುಸಾಬ್ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ದಾಖಲಾತಿಗಳ ಪ್ರಕಾರ ಸರ್ಕಾರಕ್ಕೆ 10 ಸಾವಿರ ಕೋಟಿ ರೂ ವಂಚನೆಯಾಗಿದೆ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರ ರಾಜೀನಾಮೆ ಪಡೆಯಬೇಕು.
ನಮ್ಮ ನಾಯಕ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿಯವರ ಬಗ್ಗೆ ಅವಹೇಳನಕಾರಿಯಾಗಿ ಗೂಂಡಾ ರೀತಿಯಲ್ಲಿ ಮಾತನಾಡಿದ ಅಶ್ವಥ್ ನಾರಾಯಣ್ ಕೂಡಲೇ ರಾಜ್ಯದ ಹಾಗೂ ಕುಮಾರಸ್ವಾಮಿರವರ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಅವರ ವಿರುದ್ದ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್