ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರೋಗ್ಯ ಸದೃಡಗೊಳಿಸಿಕೊಳ್ಳಬೇಕು : ಚಂದ್ರಕಲಾ | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ

ರಿಪ್ಪನ್‌ಪೇಟೆ : ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ ಹೇಳಿದರು.

     ಸಮೀಪದ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೆಳ್ಳೂರು ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಹೆಣ್ಣು ಗರ್ಭವತಿಯಾದ ದಿನದಿಂದ ಒಂದು ಸಾವಿರ ದಿನಗಳವರೆಗೆ ಪಾಲನೆ ಮಾಡುವ ಉದ್ದೇಶ ಯೋಜನೆಯದ್ದಾಗಿದೆ. ಇಂತಹ ಸಮಯದಲ್ಲಿ ಸರಕಾರದ ಯೋಜನೆಯನ್ನು ಪಡೆದುಕೊಂಡು ಮನೆಯಲ್ಲಿಯೇ ಸಿಗುವ ಹಣ್ಣು-ತರಕಾರಿ ಸೊಪ್ಪು-ಮೊಳಕೆೆಕಾಳುಗಳ ಸೇವನೆಯಿಂದ ತಮ್ಮ ಆರೋಗ್ಯವನ್ನು ಸದೃಢಗೊಳಿಸಿಕೊಳ್ಳಬೇಕು ಇದರಿಂದ ಹುಟ್ಟಿದ ಮಗು ಆರೋಗ್ಯವಂತವಾಗಿದ್ದು, ಮುಂದೆ ಅದರಿಂದ ಜನನವಾಗುವ ಪೀಳಿಗೆಯು ಆರೋಗ್ಯ ಪೂರ್ಣವಾಗಿರುತ್ತದೆ ಎಂದರು. ಮಹಿಳೆಯರಿಗೆ ಫಲತಾಂಬೂಲಗಳ ಮೂಲಕ ಉಡಿತುಂಬಿದರು.

ನಂತರ ಬೆಳ್ಳೂರು ಗ್ರಾಪಂ ಅಧ್ಯಕ್ಷೆ ಮಾತನಾಡಿ ಅಪೌಷ್ಠಿಕ ಮುಕ್ತತೆಯನ್ನು ಮನಗೊಂಡಿರುವ ಸರಕಾರ ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಹಿಳೆಯರಿಗೆ ವಿವಿಧ ಸೌವಲತ್ತುಗಳನ್ನು ನೀಡುತ್ತಿದೆ.ಈ ಯೋಜನೆಯಿಂದ ಬಡ ಹೆಣ್ಣು ಮಕ್ಕಳಿಗೆ ತುಂಬಾ ಅನುಕೂಲಕರವಾಗಿದೆ ಎಂದರು.

ಈ ಸಂಧರ್ಭದಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ವಿವಿಧ ರೀತಿಯ ಪೌಷ್ಠಿಕ ಭಕ್ಷ್ಯ ಭೋಜನವನ್ನು ಉಣಬಡಿಸಿ ಸಾಂಪ್ರದಾಯಿಕವಾಗಿ ಆರತಿ ಎತ್ತಿ ಶುಭಹಾರೈಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತಿಯ ಉಪಾಧ್ಯಕ್ಷ ರವೀಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಂಗಾರಪ್ಪ ಗ್ರಾಪಂ ಸದಸ್ಯರುಗಳಾದ   ರಾಜೇಶ್, ಬೆಳ್ಳೂರು ತಿಮ್ಮಪ್ಪ, ಅರುಣ್ ಕುಮಾರ್ , ಷಣ್ಮುಖಪ್ಪ ,ಸತೀಶ  ದಿವಾಕರ್ , ಹೇಮಾವತಿ, ಭವಾನಿ,ಕವಿತಾ, ಗಿರಿಜಮ್ಮ ಆರೋಗ್ಯ ಇಲಾಖೆಯ ರಾಘವೇಂದ್ರ, ಮಧುಸೂದನ್ ಗ್ರಾ ಪಂ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳ ಕಾರ್ಯಕರ್ತೆಯರು,ಸಹಾಯಕಿಯರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

6 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

20 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

21 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

21 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

22 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago