Headlines

ಬಂಧಿತರಾಗಿರುವ ಶಂಕಿತ ಉಗ್ರರದ್ದು ತೀರ್ಥಹಳ್ಳಿಯ ಮೂಲ ಹೌದು ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು : ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. ತೀರ್ಥಹಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂಧರ ಪರಿಚಯದಿಂದ ಈ ರೀತಿಯಾಗಿದೆ.ಬಂಧಿತ ಶಂಕಿತ ಉಗ್ರರಿಗೆ ಕರಾವಳಿ, ಕೇರಳ ಲಿಂಕ್ ಇದೆ. ಹೀಗಾಗಿಯೇ ಇಂತಹ ಕೃತ್ಯ ನಡೆಯುತ್ತಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಪೋನ್ ಬಳಕೆ ಸಹ ಆಗಿದೆ. ನಮ್ಮ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು. ಈ ಹಿಂದೆ…

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ರಿಪ್ಪನ್‌ಪೇಟೆ : ಕಾಮಗಾರಿ ಹಂತದಲ್ಲಿ ಕಿತ್ತು ಹೋದ ಬರುವೆ ಬಡಾವಣೆಯಲ್ಲಿನ ಕಾಂಕ್ರೀಟ್ ಸಂಪರ್ಕ ರಸ್ತೆ | ಇದು 40% ಅಲ್ಲಾ..!!! 60% ಕಮಿಷನ್ ನ ಕಾಮಗಾರಿಯೇ…??????

ರಿಪ್ಪನ್‌ಪೇಟೆ : ವಿಧಾನ ಪರಿಷತ್ ಸದಸ್ಯರಾಗಿದ್ದ ಆರ್ ಪ್ರಸನ್ನ ಕುಮಾರ್ ಅವಧಿಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಹೊಸಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಸರ್ಕಾರದಿಂದ ಕರ್ನಾಟಕ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಹಂತದಲ್ಲಿ ಸಂಪೂರ್ಣ ಕಿತ್ತು ಹೋಗಿ ಸಾರ್ವಜನಿಕರಲ್ಲಿ ಹಾಸ್ಯದ ವಿಷಯವಾಗಿ ಸುದ್ದಿಗೆ ಗ್ರಾಸವಾಗಿದೆ. ಶೇಕಡಾ 40% ಪರ್ಸೆಂಟ್‌ನ ರಾಜ್ಯ ಬಿಜೆಪಿ ಸರ್ಕಾರ ಎಂದು ಬೀಗುತ್ತಿರುವ ವಿರೋಧಪಕ್ಷದವರು ತಮ್ಮ ಪಕ್ಷದ ಅಗಿನ ಎಂ.ಎಲ್.ಸಿ, ಅನುದಾನದಡಿ ಬಿಡುಗಡೆ ಮಾಡಲಾದ ಹೊಸಬಡಾವಣೆಯ  ಕಾಂಕ್ರೇಟ್  ರಸ್ತೆ ಕಾಮಗಾರಿ ಅಪೂರ್ಣ ಮತ್ತು ಕಳಪೆ…

Read More

ಅಧ್ಯಕ್ಷರ ರಾಜಿನಾಮೆ ಪ್ರಹಸನದಿಂದ ಹುಂಚಾ ಸೊಸೈಟಿಗೆ ಬಿತ್ತು ಎರಡು ಲಕ್ಷ ಬಡ್ಡಿ…..!!! ಕಟ್ಟೋದ್ಯಾರು ಆಡಳಿತ ಮಂಡಳಿನಾ ?? ರೈತರಿಗೆ ಗುನ್ನಾನಾ???ಹುಂಚಾ ಸೊಸೈಟಿಯಲ್ಲಿ ಬಗೆಹರಿಯದ ಗೊಂದಲ!!!!!!

ಹುಂಚ : ಇತ್ತೀಚೆಗೆ ಹುಂಚಾ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ಪ್ರಹಸನ ಸುಖಾಂತ್ಯವಾಯಿತು ಎನ್ನುವ ಮೊದಲು ಡಿಸಿಸಿ ಬ್ಯಾಂಕ್ ಈಗ ಸುಸ್ತಿದಾರ ಸೊಸೈಟಿ ಎಂದು ಘೋಷಿಸಿ ಎರಡು ಲಕ್ಷಕ್ಕೂ ಹೆಚ್ಚು ಬಡ್ಡಿ ವಿಧಿಸಿದ್ದಾರೆಂದು ತಿಳಿದು ಬಂದಿದೆ. ಹುಂಚಾ ವ್ಯವಸಾಯ ಸಹಕಾರಿಯ ಆಡಿಟ್ ವರದಿಯಲ್ಲಿ ಐವತ್ತು ಲಕ್ಷಕ್ಕೂ ಹೆಚ್ಚೂ ವ್ಯತ್ಯಾಸವಾಗಿದೆ ಎಂಬ ಸುದ್ದಿಗೆ ಬೆದರಿ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ನೀಡಿದ್ದರು . ಉಳಿದ ನಿರ್ದೇಶಕರು ಎದ್ದು ಬಿದ್ದು ಆಡಿಟರ್ ರಿಂದ…

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು ,ಇನ್ನೊಬ್ಬ ಗಂಭೀರ

ಪೋಸ್ಟ್ ಮ್ಯಾನ್ ನ್ಯೂಸ್ ಡೆಸ್ಕ್ …………………ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರು ನಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯಾ ಜೈನ್ ಮೃತರಾಗಿದ್ದಾರೆ.ಇವರು ನಿವೃತ್ತ ಕೆಪಿಸಿ ಉದ್ಯೋಗಿಯಾಗಿದ್ದರು. ಸಹ ಪ್ರಯಾಣಿಕ ರಾಜೇಂದ್ರ ಜಯಂತ್ ಸ್ವಾಮೀಜಿ ರವರ ತಲೆಗೆ…

Read More

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ…

Read More

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.        ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ…

Read More