ಪವರ್ ಹೌಸ್ ನಲ್ಲಿ ದಿಡೀರ್ ಪ್ರತ್ಯಕ್ಷವಾದ ಚಿರತೆ : ಕೋಲಿನಿಂದ ಬೆದರಿಸಿ ಚಿರತೆ ಬಾಯಿಯಿಂದ ನಾಯಿಯನ್ನು ರಕ್ಷಿಸಿದ ಸೆಕ್ಯುರಿಟಿ ಗಾರ್ಡ್ : ವೀಡಿಯೋ ವೈರಲ್

ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ  ವಿಡಿಯೋ ವೈರಲ್ ಆಗುತ್ತಿದೆ.  ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು??? ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು. ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More

ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.  ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…

Read More

ರಿಪ್ಪನ್‌ಪೇಟೆ : ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಉಡುಪಿಯಲ್ಲಿ ಪತ್ತೆ : ಸುಖಾಂತ್ಯಗೊಂಡ ನಾಪತ್ತೆ ಪ್ರಕರಣ

ರಿಪ್ಪನ್‌ಪೇಟೆ : ಇತ್ತೀಚೆಗೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ  ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರದ ನಿವಾಸಿ ಸೌಂದರ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಉಡುಪಿಯ ಸಾಂತ್ವಾನ ಕೇಂದ್ರದಲ್ಲಿ ಪತ್ತೆಯಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಹೆದ್ದಾರಿಪುರ ಗ್ರಾಮದ ಶಶಿಕುಮಾರ್ ಎಂಬಾತನೊಂದಿಗೆ ಸೌಂದರ್ಯ ವಿವಾಹವಾಗಿದ್ದರು . ಶಶಿ ಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಮೂವರು ಪತ್ತೆಯಾಗಿ ಉಡುಪಿ ಸಾಂತ್ವಾನ ಕೇಂದ್ರದಲ್ಲಿದ್ದಾರೆ….

Read More