ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅದೇಶ ಹೊರಡಿಸಿದ್ದಾರೆ.
ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ ಬಂದಿದೆ,ಸಮಾಜದವರಿಗೆ ಅಲ್ಲದೇ ಪ್ರತಿ ಹೋಬಳಿ ಮಟ್ಟದಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ,ರಕ್ತದಾನ ಶಿಬಿರ ,ವಿದ್ಯಾರ್ಥಿಗಳು ಹಾಗೂ ರೈತರಿಗೆ ಅನುಕೂಲ ದೃಷ್ಟಿಯಿಂದ ಸರ್ಕಾರದಿಂದ ಬರುವ ಸೌಲಭ್ಯಗಳ ಮಾಹಿತಿ ತತ್ಕ್ಷಣ ನೀಡುತ್ತಿದೆ, ಇದೊಂದು ವಿಭಿನ್ನ ಪ್ರಯತ್ನ ,ಸಂಘಟನೆ ಬಹಳ ಸ್ಪಂದನೆ ಮಾಡುತ್ತಿದೆ,ಈಗ ನನಗೆ ಒಂದು ಜವಾಬ್ದಾರಿ ಸ್ಥಾನ ಕೊಟ್ಟಿದೆ ನಾನು ಪ್ರತಿಯೊಬ್ಬರಿಗೂ ಸ್ಪಂದನೆ ಮಾಡುತ್ತೇನೆ,ಸಂಘಟನೆ ನೀಡಿದ ಜವಾಬ್ದಾರಿ ನಿರ್ವಹಿಸಿ ಸಂಘಟನೆ ಕಟ್ಟಲು ನಾನು ಶ್ರಮಿಸುತ್ತೇನೆ ಎಂದರು,
ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷ ರಾಘವೇಂದ್ರ ಮುಡುಬ,ಜಿಲ್ಲಾಧ್ಯಕ್ಷ ಪ್ರವೀಣ್ ಇಡಗೋಡು,ಹೊದಲ ಶಿವು, ಸೇರಿದಂತೆ ಕಾರ್ಯಕರ್ತರು ನೂತನ ಸಂಘಟನಾ ಕಾರ್ಯದರ್ಶಿ ಪುನೀತ್ ಬೆಳ್ಳೂರು ರವರಿಗೆ ಅಭಿನಂದನೆ ತಿಳಿಸಿದ್ದಾರೆ.
About The Author
ನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ.
’ಪೋಸ್ಟ್ಮ್ಯಾನ್ ನ್ಯೂಸ್’ ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. “ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು” ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, ‘ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ’. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ ‘ಸುದ್ದಿ’ ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: “ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ.”
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
’ಪೋಸ್ಟ್ಮ್ಯಾನ್ ನ್ಯೂಸ್’ ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ ‘ಸೇತುವೆ’ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — “ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು.”
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್
🌐 [www.postmannewskannada.com]