ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ ಸಾಲದ ಭದ್ರತೆಗೆ ಪೋಷಕರು/ಜಮೀನುದಾರರು ಸ್ಥಿರಾಸ್ತಿ ಭದ್ರತೆಯನ್ನು ನೀಡಬೇಕು.
ಆಸಕ್ತರು ಅರ್ಜಿಯನ್ನು ಸೇವಾಸಿಂಧು ಪೊರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ದಿ: 30/11/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kvcdc.karnataka.gov.in
ದೂ.ಸಂ.: 080-29904268 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿಗೆ ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಹಾಗೂ ಕಾಯಕ ಕಿರಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


ಆಸಕ್ತರು ಅರ್ಜಿಯನ್ನು ಸೇವಾಸಿಂಧು ಪೊರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ ದಿ: 30/11/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kvldcl.karnataka.gov.in, whatsapp No. – 9900012351, ದೂ.ಸಂ.: 080-22865522, ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

3 hours ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

4 hours ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

4 hours ago

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…

4 hours ago

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…

8 hours ago

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…

10 hours ago