ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ.

ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ ಎಂದು ಕೇಳಿಕೊಂಡರು ಅಧಿಕಾರಿಗಳು ಕೇಳಿಸಿಕೊಳ್ಳದೇ ನಿಮಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ ಕೋರ್ಟ್ ನಿಂದ ತಡೆಯಾಜ್ಞೆನೂ ತಂದಿಲ್ಲ. ನಮ್ಮ ತೆರವು ಕಾರ್ಯಾಚರಣೆ ಮುಂದುವರೆಸುತ್ತೇವೆ ಎಂದು ಹೇಳಿ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿದರು.

ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಯಿತು.ಈ ಮಧ್ಯೆ ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದು ಪೊಲೀಸರು ಅವರನ್ನೂ ವಶಕ್ಕೆ ಪಡೆದರು.

ಈ ಮಧ್ಯೆ ಏಕಾಏಕಿ ಮನೆ ತೆರವು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮಾಜಿ ಶಾಸಕ  ಕೆ ಬಿ ಪ್ರಸನ್ನಕುಮಾರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ನೀವೇನು ಕೋರ್ಟ್ ಆದೇಶ ಪಾಲಿಸುತ್ತಿದ್ದೀರಿ, ನಿಮಗೆ ಪ್ರತಿ ತಿಂಗಳು 1 ನೇ ತಾರೀಖು ಸಂಬಳ ಬರುತ್ತದೆ. ಈ ಜನ ಎಲ್ಲಿಗೆ ಹೋಗಬೇಕು. ಒಂದು ಹೊತ್ತು ಅನ್ನಕ್ಕೂ ಪರದಾಡುತ್ತಾರೆ. ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡಲಾಗಿದೆ. 8-10 ವರ್ಷದಿಂದ ವಾಸವಾಗಿದ್ದಾರೆ. ಈಗ ಏಕಾಏಕಿ ತೆರವುಗೊಳೊಸಲು ಮುಂದಾದರೆ ಹೇಗೆ ಎಂದು ಆಕ್ರೋಶಿತರಾದರು.ಇವರ ಬಗ್ಗೆ ಚಿಂತಿಸುವುದಕ್ಕಾಗಿಯೇ ಸ್ಲಂ ಬೋರ್ಡ್ ಇದೆ. ಸ್ಲಂಬೋರ್ಡ್ ಅಧಿಕಾರಿಗಳ ಜೊತೆ ಮಾತನಾಡುವೆ ಎಂದರು.

ಸರ್ವೆ ನಂಬರ್ 19, 18 ಮತ್ತು 26 ರಲ್ಲಿ ಸೇರಿ 450 ಮನೆಗಳಿವೆ ಸರ್ವೆ ನಂಬರ್ 18 ಮತ್ತು26 ರಲ್ಲಿ ಎಲ್ಲ ಸರಿ ಇವೆ. ಸರ್ವೆ ನಂಬರ್ 19 ರಲ್ಲಿ 150-200 ಮನೆ ಅಕ್ರಮವಾಗಿದೆ ಎಂದು ನೋಟೀಸ್ ನೀಡಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

16 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

16 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

17 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

17 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

1 day ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

1 day ago