ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು.


ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ “ಪ್ರಾಥಮಿಕ ಶಿಕ್ಷಾ ವರ್ಗ-2022’’ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿ ದೇಶದಲ್ಲಿನ ಪ್ರಮುಖ ನಗರಗಳಲ್ಲಿನ ಟಿಪ್ಪು ಹೈದರ್ ನಗರಗಳು ಮಿನಿ ಪಾಕಿಸ್ತಾನಗಳಾಗಿವೆ.ಭಾರತ ದೇಶದಲ್ಲಿ ಹಿಂದೂಗಳು ಹಾರಹಾಕಿ ಸ್ವಾಗಿಸುತ್ತೇವೆ ಹೊರತು ಕುತ್ತಿಗೆ ಮೇಲೆ ಕತ್ತಿ ಇಡುವವರಲ್ಲ.ಜನಸಂಖ್ಯಾ ನಿಯಂತ್ರಣಕ್ಕಾಗಿ ಸರ್ಕಾರ ಹೆಣ್ಣು ಗಂಡಿರಲ್ಲಿ ಮಕ್ಕಳೇರಡೇ ಸಾಕು ಎಂದು ಸರ್ಕಾರ ಘೋಷಣೆ ಮಾಡಿ ನಂತರ ನಾವಿಬ್ಬರು ನಮಗೆ ಇಬ್ಬರು ನಂತರ ಹೆಣ್ಣಿರಲಿ ಗಂಡಿರಲ್ಲಿ ಮಗುವೊಂದು ಸಾಕು ಈಗ ಅದು ಇಲ್ಲದೆ ನಾವಿಬ್ಬರೇ ಸಾಕು ಅನುವಂತಾಗಿರುವ ಭಾರತದೇಶದಲ್ಲಿ ಮುಸಲ್ಮಾನರು ಯಾವುದೇ ಸರ್ಕರದ ನಿಯಮವನ್ನು ಪಾಲಿಸದೆ ಐದಾರು ಜನ ಪತ್ನಿಯರನ್ನು ಹೊಂದಿ ಜನಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಿಸುವ ಕಾರ್ಯದೊಂದಿಗೆ ಗುರಿಯನ್ನಾಗಿಸಿಕೊಂಡಿದ್ದಾರೆಂದರು.


ಹಿಂದುಗಳಿಗೆ ಏಕ ಪತ್ನಿ ವ್ರತ ಜಾರಿಗೊಳಿಸಿದ ಹಿಂದಿನ ಸರ್ಕಾರಗಳು ಮುಸ್ಲಿಂರಿಗೆ ಏಕೆ ಹೇಳಲ್ಲಿಲ್ಲ. ಪೋಲಿಯೋ ಮತ್ತು ಕೊರೋನಾ ಲಸಿಕೆ ಹಾಕಿಸಿಕೊಂಡರೇ ಮಕ್ಕಳಾಗುವುದಿಲ್ಲ ಎಂದು ಹೇಳಿ ಲಸಿಕೆ ಹಾಕಿಕೊಳ್ಳಲು ಬಾರದ ಮುಸ್ಲಿಂ ಜನಾಂಗದವರು ಮಕ್ಕಳನ್ನು ಮಾಡುವ ಚಿಂತನೆಯಲ್ಲಿದ್ದಾರೆಂದು ಹೇಳಿ ಮುಸಲ್ಮಾನರಿಗೆ ಕೇಸರಿ ಕಂಡರೆ ತುರುಕಿ ಬಂದವರAತೆ ಮಾಡುತ್ತಾರೆ.ದೇಶ ವಿಭಜನೆ ಮಾಡುವ ಪ್ರಯತ್ನದಿಂದ ನಮ್ಮ ಭಾರತ ದೇಶದ ಧಾರ್ಮಿಕ ನಂಬಿಕೆಗೆ ದಕ್ಕೆ ತರುವ ಕೆಲಸದಲ್ಲಿ ತೊಡಗಿ ಭಾರತ ದೇಶವನ್ನು ಪಾಕಿಸ್ತಾನದ ಮುಸಲ್ಮಾರ ದೇಶವನ್ನಾಗಿ ಮಾಡಲು ಹೊರಟಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಎಚ್ಚರಿಕೆ ನೀಡಿದರು.

ಆಖಂಡ ಹಿಂದೂಸ್ಥಾನಿಕವನ್ನು ತ್ರಿಖಂಡ ಮಾಡಲು ಬಿಡುವುದಿಲ್ಲ. ಭಯೋತ್ಪಾದನೆ ಹುಟ್ಟುಹಾಕುವ ಕಾರ್ಖಾನೆ ಪಾಕಿಸ್ತಾನವಾಗಿದೆ ಎಂದ ಅವರು ಜಗತ್ತು ಉಳಿಯಬೇಕಾದರೆ ಹಿಂದೂಗಳು ಸಂಘಟನೆಗೊಳ್ಳಬೇಕು.ಜಗತ್ತಿನ ಹಿತಕೋಸ್ಕರ ನಮ್ಮ ಸಂಘಟನಾ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಯುವಜನಾಂಗಕ್ಕೆ ಕರೆ ನೀಡಿದರು.

ಸಾಗರ ಜಿಲ್ಲೆ ಪ್ರಾಂತ್ಯದ ಹೊಸನಗರ ಸಾಗರ ಶಿಕಾರಿಪುರ ಸೊರಬ ತಾಲ್ಲೂಕಿನ ವ್ಯಾಪ್ತಿಯಿಂದ 131 ಶಿಬಿರಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಸಮೋರೋಪ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಹೊಂಬುಜ ಜೈನ ಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ ಮಕ್ಕಳಲ್ಲಿ ರಾಷ್ಟ್ರಭಿಮಾನ.ಸಾಂಸ್ಕೃತಿಕವಾಗಿ ಶೈಕ್ಷಣಿಕವಾಗಿ ಮತ್ತು ವೈಚಾರಿಕವಾಗಿ ಭಾರತ ದೇಶ ಹಿರಿಮೆಯನ್ನು ಹೊಂದಿದೆ.ಭಾರತ ದೇಶದ ಪರಂಪರೆಯಲ್ಲಿ ಧಾರ್ಮಿಕ ಮತ್ತು ಅಧ್ಯಾತ್ಮಿಕ ಭಾವನೆಗಳಿಗೆ ವಿಶೇಷವಾದ ಸ್ತಾನವಿದೆ.ಇದರಿಂದಲೇ ವಿಶ್ವಮಟ್ಟದಲ್ಲಿ ಅಹಿಂಸಾ ತತ್ವ ಭೋದನೆಯ ಮೂಲಕ ಶಾಂತಿ ನೆಮ್ಮದಿ ನೆಲಸಲು ಕಾರಣವಾಗಿದೆ ಎಂದ ಅವರು ದೇಶದ ಪ್ರಾಚೀನ ಇತಿಹಾಸವನ್ನು ನಮ್ಮ ಇಂದಿನ ಯುವ ಪೀಳಿಗಗೆ ಪರಿಚಯಿಸುವ ಕೆಲಸದಲ್ಲಿ ರಾಮಯಾಣ ಮಹಾಭಾರತದ ಕಥೆಗಳಿಂದ ಜನಜಾಗೃತಿ ಮಾಡಬೇಕಾಗಿದೆ  ಎಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ಯಾಮಸುಂದರ್ ವಹಿಸಿದ್ದರು.
ಶ್ರೀಧರ ನಿಸಾರಾಣಿ ಸ್ವಾಗತಿಸಿದರು.ಶಿಬಿರದ ವರದಿಯನ್ನು ಗಣೇಶ್ ಮಂಡಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

2 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

9 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

9 hours ago