ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಬೇಳೂರು ನೇತ್ರತ್ವದಲ್ಲಿ ಪ್ರತಿಭಟನೆ | ಪೇ..ಸಿಎಂ ಅಲ್ಲಾ ಪೇ ಹಾಲಪ್ಪ…ಪೇ. ಸಂಸದ… ಮಾಜಿ ಶಾಸಕ ಗಂಭೀರ ಅರೋಪ |

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು-ಪೂಜಾರದಿಂಬ ಸಂಪರ್ಕ ರಸ್ತೆಯ ಪಿಎಂಜಿಎಸ್‌ವೈ ಯೋಜನೆಯಡಿ 4.41 ಕೋಟಿ ವೆಚ್ಚದಲ್ಲಿ ನಿರ್ವಹಿಸಲಾಗಿರುವ ಕಾಮಗಾರಿ ಕೇವಲ ಮೂರು ತಿಂಗಳಲ್ಲಿ ಕಿತ್ತು ಹೋಗಿರುವುದನ್ನು ಖಂಡಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷದವರು ಇಂದು ಪ್ರತಿಭಟನೆ ನಡೆಸಿದರು.


ಪ್ರತಿಭಟನಾ ಸಭೆಯನುದ್ದೇಶಿಸಿ ಮಾತನಾಡಿದ ಬೇಳೂರು ಪೇ.ಸಿಎಂ ಅಲ್ಲ……ಪೇ.ಹಾಲಪ್ಪ….ಪೇ.ಸಂಸದ  ಎಂದು  ಟೀಕಿಸುವುದರೊಂದಿಗೆ ಬಾಳೆಹಣ್ಣು ತಿಂದು………! ಸಿಪ್ಪೆಯನ್ನು ಗುತ್ತಿಗೆದಾರರಿಗೆ ಬಿಟ್ಟಿದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂಬುವ ಹಾಗಿದೆ ಈ ಕಾಮಗಾರಿ. ರಾಜ್ಯ ಸರ್ಕಾರ ಶೇಕಡಾ 40 ಪರ್ಸೇಂಟ್ ಆಗಿ ಉಳಿದಿಲ್ಲ ಈಗ 80% ಕಮಿಷನ್ ಸರ್ಕಾರವಾಗಿದೆ ಎಂದರು.

ಕೇಂದ್ರದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಗ್ರಾಮಗಳ ಸಂಪರ್ಕ ರಸ್ತೆಯಲ್ಲಿಯೂ ಕಮೀಷನ್ ತಿನ್ನುವುದರ ಮೂಲಕ 4.40 ಕೋಟಿ ಹಣವನ್ನು ನೀರಿನಲ್ಲಿ ಹೋಮ ಮಾಡಿದ್ದಾರೆ. ಈಬಗ್ಗೆ ಸಮಗ್ರ ತನಿಖೆ ನಡೆಸುವ ಮೂಲಕ ಗುತ್ತಿಗೆದಾರ ಮತ್ತು ಪಿಎಂಜಿಎಸ್‌ವೈ ಯೋಜನೆಯ ಅಧಿಕಾರಿಗಳನ್ನು ಅಮಾನತು ಪಡಿಸುವಂತೆ ಸಭೆಯಲ್ಲಿ ಸರ್ಕಾರವನ್ನು ಆಗ್ರಹಿಸಿದರು.

ನಾನು ಸೊರಬದಲ್ಲಿ ಮಾಡಿದ ಕಾಮಗಾರಿಗಳ ಬಗ್ಗೆ ಬೀಗುವ ಶಾಸಕ ಹರತಾಳು ಹಾಲಪ್ಪನವರಿಗೆ ಕ್ಷೇತ್ರದಲ್ಲಿ ಮಾಡಲಾಗಿರುವ ಕಳಪೆ ಕಾಮಗಾರಿ ಕಣ್ಣಿಗೆ ಬೀಳಲಿಲ್ಲವೇ ,ಕಳೆದ ಮೂರು ತಿಂಗಳ ಹಿಂದೆ ಮಾಡಲಾದ ಡಾಂಬರ್ ರಸ್ತೆಯೂ ಕಳಪೆಯಾಗಿರುವ ಬಗ್ಗೆ ಮಾಧ್ಯಮದಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಬೆಳಗಾಗುವುದರೊಳಗೆ ಸಿಮೆಂಟ್ ರಸ್ತೆಯಾಗಿ ಪರಿವರ್ತನೆಯಾಗಿದೆ ಎಂದರು.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ ಇದೊಂದು ಭಷ್ಟಾಚಾರದ ಸರ್ಕಾರವಾಗಿದೆ.ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಭಯವೇ ಇಲ್ಲದಂತಾಗಿ ತಾವು ಸಿಪ್ಪೆ ತಿನ್ನುವುದರಲ್ಲಿ ಏನು ಗುಣಮಟ್ಟದ ಕಾಮಗಾರಿ ಮಾಡಲು ಸಾಧ್ಯವೆಂದು ಹೇಳಿ ಈ ಬಗ್ಗೆ ಸಂಬAಧ ಪಟ್ಟ ಇಂಜಿನಿಯರ್ ಮತ್ತು ಅಧಿಕಾರಿಗಳನ್ನು ಅಮಾನತ್ತು ಪಡಿಸುವುದರೊಂದಿಗೆ ಕಾಮಗಾರಿಯನ್ನು ಹೊಸದಾಗಿ ಮಾಡುವುದು ಮತ್ತು ಈಗ ಮಾಡಲಾಗಿರುವ ಕಾಮಗಾರಿಯ ಹಣವನ್ನು ತಡೆಹಿಡಿಯುವಂತೆ ಅಗ್ರಹಿಸಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಜಿ.ಪಂ.ಸ.ಬಿ.ಪಿ.ರಾಮಚಂದ್ರ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷ ಉಬೇದುಲ್ಲಾ ಷರೀಪ್,ಅರಸಾಳು ಗ್ರಾ.ಪಂ ಅಧ್ಯಕ್ಷ ಉಮಾಕರ,ಬ್ಲಾಕ್ ಕಾಂಗ್ರೇಸ್ ಆಧ್ಯಕ್ಷ ಬಿ.ಜಿ.ನಾಗರಾಜ್,ಪಕ್ಷದ ಮುಖಂಡರಾದ ಎಂ ಎಂ ಪರಮೇಶ್, ಡಿ.ಈ.ಮಧುಸೂಧನ್,ಅಶೀಫ್, ಎನ್.ಚಂದ್ರೇಶ್, ಅಮೀರ್ ಹಂಜಾ, ಗಣಪತಿ,ಸೋಮಶೇಖರ್‌ಲಾವಿಗೆರೆ, ಗಣಪತಿ ಮಂಡಗಳಲೇ,ರವಿಂದ್ರಕೆರೆಹಳ್ಳಿ,ಉಲ್ಲಾಸ್,ಸದಾಶಿವ ಶೆಟ್ಟಿ,ಶ್ರೀಧರ್,ದೇವರಾಜ್‌ಹಾಲುಗುಡ್ಡೆ, ಜಿ.ಆರ್.ಗೋಪಾಲಕೃಷ್ಣ, ರತೇಶ್ವರಪ್ಪಗೌಡ,ಪ್ರಕಾಶಪಾಲೇಕರ್,ರಮೇಶ್ ಫ಼್ಯಾನ್ಸಿ,ಚಿನ್ಮಯ್ ಹಾಗೂ
ಇನ್ನಿತರ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

6 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

19 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

21 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

21 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

21 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago