ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.



ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ ಮಾಡಬೇಕಾಗಿತ್ತು. ಆದರೆ ಗುತ್ತಿಗೆದಾರನ ಬೇಜವಾಬ್ದಾರಿ ಹಾಗೂ ಇಂಜಿನಿಯರ್ ರವರ ನಿರ್ಲಕ್ಷ್ಯದಿಂದಾಗಿ ರಸ್ತೆಯ ಕೆಲವು ಕಡೆಯಲ್ಲಿ ಗುಣಮಟ್ಟದಲ್ಲಿ ದೋಷ ಕಂಡುಬಂದಿರುತ್ತದೆ.
ಮಲೆನಾಡಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿ ಬೀಳುವುದರಿಂದಾಗಿ ನೂತನ ತಂತ್ರಜ್ಞಾನ ಅಳವಡಿಸುವುದು ಕಷ್ಟಕರವಾಗಿದೆ ಎಂದರು.

ಪ್ರಧಾನ ಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ರಾಜಕಾರಣಿಗಳಿಗೆ ಯಾವುದೇ ಪರ್ಸೆಂಟೇಜ್ ಸಿಗುವುದಿಲ್ಲ ಎಂಬ ಸತ್ಯ ಆರೋಪ ಮಾಡುವವರಿಗೂ ಗೊತ್ತು ಆದರೂ ಆತ್ಮಸಾಕ್ಷಿಗೆ ವಿರುದ್ದವಾಗಿ ಹೇಳಿಕೆಗಳನ್ನು ನೀಡುತ್ತಾರೆ ಎಂದು ಹೇಳಿದರು.

ಹಿರಿಯ ಅಧಿಕಾರಿಗಳು ಕಾಮಗಾರಿ ಹಂತದಲ್ಲಿ ಸ್ಥಳಕ್ಕೆ ಭೇಟಿ ನೀಡದೇ ಇರುವುದೇ ಇದಕ್ಕೆ ಕಾರಣವೆಂದ ಶಾಸಕರು ಸ್ಥಳದಲ್ಲಿ ಹಾಜರಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಮತ್ತು ಕಿರಿಯ ಅಭಿಯಂತರರನ್ನು ತರಾಟೆ ತಗೆದುಕೊಂಡು ನಿಮ್ಮಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಗುಣಮಟ್ಟವು ಕಳೆಪೆಯಾಗಲು ಕಾರಣವಾಗಿದೆ.ಡಿಸೆಂಬರ್ ತಿಂಗಳಲ್ಲಿ ನೂತನ ತಂತ್ರಜ್ಞಾನ ಅಳವಡಿಸಿ ನಿರ್ಮಿಸಿರುವ ರಸ್ತೆಯನ್ನು ದುರಸ್ಥಿಪಡಿಸುವಂತೆ ತಾಕೀತು ಮಾಡಿದರು.


ಈ ಸಂದರ್ಭದಲ್ಲಿ ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್,  ಮುಖಂಡರಾದ ಎಂ ಬಿ‌ ಮಂಜುನಾಥ್, ಆನಂದ್ ಮೆಣಸೆ ಜಿ.ಪಂ. ಎ.ಟಿ.ನಾಗರತ್ನ, ಪಿ.ರಮೇಶ್, ಸುಂದರೇಶ್, ಜಿ.ಡಿ.ಮಲ್ಲಿಕಾರ್ಜುನ, ಜಾಗದ್ದೆ ಉಮೇಶ್, ರಾಮಚಂದ್ರ ಹರತಾಳು, ಪಿ.ಸುಧೀರ್, ಸುಧೀಂದ್ರ ಪೂಜಾರಿ, ದೊಡ್ಡಯ್ಯ, ಮಾವಿನಸರ ರಘು, ಜಗದೀಶ ನೇರಲುಮನೆ ಇನ್ನಿತರ ಹಲವು ಮುಖಂಡರು ಹಾಜರಿದ್ದರು.

ಪಿ.ಎಂ.ಜಿ.ಎಸ್.ಐ ಸಹಾಯಕ ಕಾರ್ಯಪಾಲಕ ಅಭಿಯಂತರು ಮತ್ತು ಕಿರಿಯ ಅಭಿಯಂತರರು ಇದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

6 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

19 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

21 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

21 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

22 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago