ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ.
ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ ನ ಮುಂದೆ ಪ್ರತಿಜ್ಞೆ ಮಾಡಿರುತ್ತಾರೆ. ಅಷ್ಟೇ ಅಲ್ಲದೆ ಇದನ್ನು ಮೀರಿಯೂ ಯಾರಾದರೂ ಅಕ್ರಮ ಮದ್ಯ ಮಾರಾಟ ಮಾಡಿ ಅವರಿಗೆ ಏನಾದರು ದೈವ ನಿಂದ ತೊಂದರೆ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಪ್ರಮಾಣ ಮಾಡಿರುತ್ತಾರೆ.
ಇಷ್ಟೆಲ್ಲದರ ನಡುವೆ ವಿಶ್ವಾಸ್ ಚಿಕನ್ ಸ್ಟಾಲ್ ನಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದ ಹಿನ್ನಲೆಯಲ್ಲಿ ರಮೇಶ್ ( 50 ವರ್ಷ ) ಸಾವನಪ್ಪಿದ್ದಾನೆ.
ಸಾವಿನಲ್ಲೂ ಅನುಮಾನ !?
ರಮೇಶ್ ಎಂಬುವನು ಕಲಾಸಿಪಾಳ್ಯ ಎಂದೇ ಚಿರಪರಿಚಿತನಾಗಿದ್ದು ಈತನ ಸಾವಿನಲ್ಲೂ ಹಲವು ಅನುಮಾನಗಳು ಕಾಣುತ್ತಿವೆ. ಅಕ್ರಮ ಮದ್ಯ ಕುಡಿದ ಎಂಬ ಕಾರಣಕ್ಕೆ ಆತನ ಮೇಲೆ ರಾಡ್ ನಿಂದ ಹಲ್ಲೆ ನೆಡೆಸಿ ಗದ್ದೆಗೆ ಬಿಸಾಕಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಇದು ಮದ್ಯ ಕುಡಿದು ಸಾವನ್ನಪ್ಪಿದ್ದ ಅಥವಾ ಹಲ್ಲೆ ನೆಡೆಸಿ ಸಾಯಿಸಿದ್ದ ಪೊಲೀಸ್ ಇಲಾಖೆಯಿಂದ ತಿಳಿದು ಬರಬೇಕಿದೆ.
ಗೃಹಸಚಿವರ ತವರೂರಿನಲ್ಲೇ ಇಂತಹ ಅಕ್ರಮ ಮದ್ಯ ಮಾರಾಟ ನೆಡೆಯುತ್ತಿದ್ದು ಹಲವು ಅನುಮಾನಗಳಿಗೆ ಎಡಿಮಾಡಿಕೊಟ್ಟಿದೆ.
ಕೊಟ್ರ ಗ್ರಾಮಕ್ಕೆ ಈಗಾಗಲೇ ಸಿಪಿಐ ಅಶ್ವಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು ಅಂಗಡಿಯನ್ನು ಸೀಜ್ ಮಾಡಲಾಗಿದೆ. ಅಂಗಡಿ ಮಾಲೀಕ ವಸಂತ ಎನ್ನುವವನನ್ನು ವಶಕ್ಕೆ ಪಡೆದಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್