ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ.
ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ.
ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ
ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎದೆಗೆ ಚಾಕು ಇರಿದ್ದರಿಂದ ಉಸಿರಾಟದ ತೊಂದರೆ ಎದುರಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಈ ಗಲಾಟೆ ನಡೆದಿದೆ ಎನ್ನಲಾಗಿದ್ದು. ಮಾಳೂರು ಪೊಲೀಸರು ಗಾಯಾಳುವಿನ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲು ಅಣಿಯಾಗಿದ್ದಾರೆ.
ಘಟನೆ ಸಂಬಂಧ ರಾಜೀ ಸಂಧಾನದ ಪ್ರಕ್ರೀಯೆಗಳು ನಡೆಯುತ್ತಿದ್ದು, ಅದಕ್ಕೆ ಗಾಯಾಳುವಿನ ತಂದೆ ಒಪ್ಪುತ್ತಿಲ್ಲ ಎಂದು ತಿಳಿದುಬಂದಿದೆ.