ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು.


ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ವಿಜೃಂಭಣೆಯಿಂದ ಆಯುಧ ಪೂಜೆಯನ್ನು ನೆರವೇರಿಸಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಗೃಹಸಚಿವನಾಗಿ ಒಂದು ವರ್ಷ ಮೂರು ತಿಂಗಳಾಯಿತು. ಹಲವು ಸಮಸ್ಯೆಗಳು ನನ್ನ ಅವಧಿಯಲ್ಲಿ ಬಂದಿದೆ. ಬಹಳಷ್ಟು ಜನರು ನನನ್ನು  ಈ ಖಾತೆ ನಿನಗೆ ಬೇಕಿತ್ತಾ ಎಂಬುದಾಗಿಯೂ  ಕೇಳಿದ್ದರು. ನನ್ನ ಜೀವನದಲ್ಲಿ ನನಗೆ ಇದೊಂದು ರೀತಿ ಚಾಲೆಂಜ್, ಸುಲಭದ ಖಾತೆ ಅಥವಾ ಇನ್ಯಾವುದೇ ಖಾತೆಯನ್ನು ಯಾರು ಬೇಕಾದರೂ ನಿಭಾಯಿಸಬಹುದು. ಈ ಖಾತೆಯನ್ನು ನಿಭಾಯಿಸಲು ಶಕ್ತಿ ಇದೆ ಎಂದೇ ನಮ್ಮ ಹಿರಿಯರು ನನಗೆ ಕೊಟ್ಟಿದ್ದಾರೆ. ಮಂತ್ರಿಯಾಗುವುದೇ ಕಷ್ಟವಿತ್ತು ಅಂತಹದರಲ್ಲಿ ದೊಡ್ಡ ಖಾತೆಯೊಂದನ್ನು ನೀಡಿದ್ದಾರೆ ಹಾಗಾಗಿ ಇದೊಂದು ರೀತಿ ಚಾಲೆಂಜ್ ಆಗಿ ಸ್ವೀಕಾರ ಮಾಡಿದ್ದೇನೆ ಎಂದು ತಿಳಿಸಿದರು.

ತಾವು ಗೃಹಸಚಿವರಾದ ನಂತರ ಪೊಲೀಸ್ ಇಲಾಖೆಗೆ ಏನೆಲ್ಲಾ ವ್ಯವಸ್ಥೆ ಆಗಿದೆ ಮತ್ತು ಆಗಬೇಕಿದೆ ಎಂಬುದನ್ನು ಸಿಬ್ಬಂದಿಗಳ ಹತ್ತಿರ ಚರ್ಚಿಸಿದರು. ಆಯುಧ ಪೂಜೆಯ ಪ್ರಯುಕ್ತ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸಾಂಸ್ಕೃತಿಕ ಉಡುಪನ್ನು ಧರಿಸುವ ಮೂಲಕ ಕಣ್ಮನ ಸೆಳೆದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ವರದಿ : ಅಕ್ಷಯ್ ಕುಮಾರ್

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

5 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

12 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

24 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

1 day ago