Headlines

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ.

ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ:



ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು ಕೂಗಾಡಿದ್ದಾನೆ.

ಅಕುಲ್ ಕೂಗಾಟಕ್ಕೆ ಅಕ್ಕಪಕ್ಕದ  ಜನರು ಬಂದ ಕಾರಣ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳ ತಂಡ ಬಿಟ್ಟು ಪರಾರಿಯಾಗಿದೆ.

ಒಟ್ಟಿನಲ್ಲಿ ವಿದ್ಯಾರ್ಥಿಯೊಬ್ಬನ ಚಾಣಕ್ಷತನ ಮತ್ತು ಸಾಹಸದಿಂದ ಅನಾಹುತವೊಂದು ತಪ್ಪಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version