ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ.
ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ:
ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು ಕೂಗಾಡಿದ್ದಾನೆ.
ಅಕುಲ್ ಕೂಗಾಟಕ್ಕೆ ಅಕ್ಕಪಕ್ಕದ ಜನರು ಬಂದ ಕಾರಣ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳ ತಂಡ ಬಿಟ್ಟು ಪರಾರಿಯಾಗಿದೆ.
ಒಟ್ಟಿನಲ್ಲಿ ವಿದ್ಯಾರ್ಥಿಯೊಬ್ಬನ ಚಾಣಕ್ಷತನ ಮತ್ತು ಸಾಹಸದಿಂದ ಅನಾಹುತವೊಂದು ತಪ್ಪಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್