ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು.

ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು.




ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಮತ್ತು ಪುನಿತ್‌ರಾಜ್ ಸ್ಮರಣೆ ಕಾರ್ಯಕ್ರಮ ಅಯೋಜಿಸಲಾಗಿದೆ.
ನವಂಬರ್ 1 ರಂದು ಬೆಳಗ್ಗೆ ತಾಯಿ ಭುವನೇಶ್ವರಿಯ ಅಲಂಕೃತ ಭಾವಚಿತ್ರ ರಾಜಬೀದಿ ಉತ್ಸವಕ್ಕೆ ಸಾಹಿತಿ ಹ.ಅ.ಪಾಟೀಲ ಚಾಲನೆ ನೀಡುವರು.

ರಾಜಬೀದಿ ಉತ್ಸವದ ನಂತರ ಉದ್ಘಾಟನಾ ಸಮಾರಂಭವು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜ್ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ.ಹಾ.ಮಾ.ನಾಗಾರ್ಜುನ ಉದ್ಘಾಟಿಸುವರು.




ಸಮಾರಂಭದ ಅಧ್ಯಕ್ಷತೆಯನ್ನು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ವಹಿಸುವರು.ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಅಡಳಿತ ಮಂಡಳಿ ಸದಸ್ಯರು ಪಾಲ್ಗೊಳಲ್ಲಿದ್ದಾರೆ.

ಸಮಾರೋಪ ಸಮಾರಂಭ;-

ಇದೇ ದಿನ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವು ಜರುಗಲಿದ್ದು ಈ ಕಾರ್ಯಕ್ರಮಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಮಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ  ,ಆರ್ ಎಂ ಮಂಜುನಾಥಗೌಡ,ಕಲಗೋಡು ರತ್ನಾಕರ,ಸುರೇಶ್ ಸ್ವಾಮಿರಾವ್,ಬಂಡಿ ರಾಮಚಂದ್ರ, ಆರ್.ಎ.ಚಾಬುಸಾಬ್ ಇನ್ನಿತರ ಮುಖಂಡರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ವಿವರಿಸಿದರು.




ಅಹ್ವಾನ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಆರ್.ಎ.ಚಾಬುಸಾಬ್,ಧನಲಕ್ಷ್ಮಿ, ಲಕ್ಷ್ಮಿ ಶ್ರೀನಿವಾಸ್,ಶ್ರೀನಿವಾಸ್ ಅಚಾರ್,ಟಿ.ಆರ್.ಕೃಷ್ಣಪ್ಪ, ಜಿ.ಎಸ್.ವರದರಾಜ್,ಕುಕ್ಕಳಲೇಈಶ್ವರಪ್ಪಗೌಡ,ಹಸನಬ್ಬ,ಆರ್.ರಾಘವೇಂದ್ರ,ರಮೇಶ್ ಫ಼್ಯಾನ್ಸಿ,
ಪ್ರಕಾಶಪಾಲೇಕರ್,ಆರ್.ಎನ್.ಮಂಜುನಾಥ,ಜಿ.ಡಿ.ಮಲ್ಲಿಕಾರ್ಜುನ, ಗಣಪತಿಗವಟೂರು, ಚೋಳರಾಜ್,ಬಿಎಸ್‌ಎನ್
ಎಲ್ ಶ್ರೀಧರ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

59 minutes ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

1 hour ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago