ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು.
ಸದ್ಯ ಗಾಯಾಳು ಅಶೋಕ್ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು ಮೇಲೆ ದಾಳಿ ನಡೆಸಿದ್ದಾರೆ. ಅಶೋಕ್ ಪ್ರಭು ಕೆಳಗೆ ಬೀಳುತ್ತಿದ್ದಂತೆ ಮೊಬೈಲ್ ಕಿತ್ತುಕೊಳ್ಳಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ಅಶೋಕ್ ಪ್ರಭು ಪ್ರತಿರೋಧ ಒಡ್ಡಿದಾಗ ಹರಿತವಾದ ವಸ್ತುವಿನಿಂದ ದಾಳಿ ನಡೆಸಿದ್ದಾರೆ. ಕೊನೆಗೆ ಅಶೋಕ್ ಪ್ರಭು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದಿದ್ದಾರೆ.
ಅಶೋಕ್ ಪ್ರಭು ಮುಖದ ಭಾಗಕ್ಕೆ ಗಾಯವಾಗಿದೆ. ದುಷ್ಕರ್ಮಿಗಳು ಉರ್ದು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಅಶೋಕ್ ಪ್ರಭು ಮಾಹಿತಿ ನೀಡಿದ್ದಾರೆ. ಅಶೋಕ್ ಪ್ರಭು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…