ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ.
ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ, ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ 6 ಜನ ಅವಿಶ್ವಾಸದ ನಿರ್ಣಯದ ಪರವಾಗಿ ಮತ ಚಲಾಯಿಸಿದರು.ಅಧ್ಯಕ್ಷರು ಮತ್ತು ಇನ್ನೊಬ್ಬ ಸದಸ್ಯೆಯಾದ ಪ್ರೇಮ ಪುರುಷೋತ್ತಮ ಅಧ್ಯಕ್ಷರ ಪರವಾಗಿ ಗೈರಾಗಿದ್ದರು.
ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಕಲ್ಲಿ ಯೋಗೇಂದ್ರಪ್ಪ ಆಯ್ಕೆಯಾಗುವಾಗ ಕಣಕಿ ನಾರಾಯಣಪ್ಪ ರವರಿಗೆ 15 ತಿಂಗಳ ನಂತರ ಬಿಟ್ಟು ಕೊಡುವುದಾಗಿ ಮಾತುಕತೆ ನಡೆದಿತ್ತು ಆದಾಗ್ಯೂ ಅಧಿಕಾರ ಬಿಟ್ಟು ಕೊಡದೇ ಅಧಿಕಾರಕ್ಕೆ ಅಂಟಿಕೊಂಡು ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರಿ ತಮ್ಮ ಸ್ಥಾನದ ಭದ್ರತೆಯಲ್ಲಿ ಇದ್ದರು ಎನ್ನಲಾಗುತ್ತಿದೆ.
ಅಧ್ಯಕ್ಷರ ವರ್ತನೆಯಿಂದ ಸದಸ್ಯರೆಲ್ಲ ಬೇಸತ್ತು ಅವಿಶ್ವಾಸ ನಿರ್ಣಾಯ ಮಾಡುವ ನಿರ್ಧಾರಕ್ಕೆ ಬಂದು ಇಂದು ಅವರನ್ನು ಅಧ್ಯಕ್ಶ ಸ್ಥಾನದಿಂದ ಕೆಳಗಿಳಿಸಿದ್ದಾರೆ.
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…