ಹೊಸನಗರ : ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ (03-10-2022) ಸೋಮವಾರ ನಡೆದಿದೆ.
ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆಯಾಗಿದ್ದಾರೆ.
ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಮಹಿಳೆಯನ್ನು ಕೋಡಿನಿಂದ ತಿವಿದು ನಂತರ ಎತ್ತಿ ಬಿಸಾಡಿದೆ.ಮಹಿಳೆಯ ಕೈಮುರಿತವಾಗಿದ್ದು, ಹೊಟ್ಟೆ, ಹಣೆ, ಮೇಲೆ ತಿವಿದ ಗಾಯಗಳಾಗಿವೆ.
ಮಹಿಳೆಯ ಚೀರಾಟ ಕೇಳಿ ತುಸುದೂರದಲ್ಲಿದ್ದ ಪತಿ ನರಸಿಂಹ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕಾಡುಕೋಣ ಅಲ್ಲಿಂದ ಮರೆಯಾಗಿದೆ. ಕೂಡಲೇ ತೀವ್ರ ಗಾಯಗೊಂಡಿದ್ದ ಜಯಮ್ಮರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಯಿತು. ಬಳಿಕ ಈಗ ಮಂಗಳೂರು ಸುರತ್ಕಲ್ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಡುಕೋಣ ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ವಲಯ ಅರಣ್ಯಾಧಿಕಾರಿ ಸಂಜಯ್ ಬೇಟಿ ನೀಡಿ ಪರಿಶೀಲಿಸಿದರು. ಬಳಿಕ ಸೂಕ್ತ ಪರಿಹಾರಕ್ಕೆ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…