ಹೊಸನಗರ : ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ (03-10-2022) ಸೋಮವಾರ ನಡೆದಿದೆ.
ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆಯಾಗಿದ್ದಾರೆ.
ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಮಹಿಳೆಯನ್ನು ಕೋಡಿನಿಂದ ತಿವಿದು ನಂತರ ಎತ್ತಿ ಬಿಸಾಡಿದೆ.ಮಹಿಳೆಯ ಕೈಮುರಿತವಾಗಿದ್ದು, ಹೊಟ್ಟೆ, ಹಣೆ, ಮೇಲೆ ತಿವಿದ ಗಾಯಗಳಾಗಿವೆ.
ಮಹಿಳೆಯ ಚೀರಾಟ ಕೇಳಿ ತುಸುದೂರದಲ್ಲಿದ್ದ ಪತಿ ನರಸಿಂಹ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕಾಡುಕೋಣ ಅಲ್ಲಿಂದ ಮರೆಯಾಗಿದೆ. ಕೂಡಲೇ ತೀವ್ರ ಗಾಯಗೊಂಡಿದ್ದ ಜಯಮ್ಮರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಯಿತು. ಬಳಿಕ ಈಗ ಮಂಗಳೂರು ಸುರತ್ಕಲ್ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಡುಕೋಣ ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ವಲಯ ಅರಣ್ಯಾಧಿಕಾರಿ ಸಂಜಯ್ ಬೇಟಿ ನೀಡಿ ಪರಿಶೀಲಿಸಿದರು. ಬಳಿಕ ಸೂಕ್ತ ಪರಿಹಾರಕ್ಕೆ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…