ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಸಾವು.
ಶಿಕಾರಿಪುರದ ಗಾಮಾ ಗ್ರಾಮ ಹಾಗೂ ಸೊರಬ ತಾಲ್ಲೂಕಿನ ಜಡೆ ಗ್ರಾಮ ಹಾಗೂ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಇಬ್ಬರು ಬಲಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿ ಗಾಮಾ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಎಂಬಾತ ಸಾವನ್ನಪ್ಪಿದ್ದಾನೆ. ಘಟನೆ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಹೋರಿ ಬೆದರಿಸುವ ಸಂದರ್ಭದಲ್ಲಿ, ಬೆದರದ ಹೋರಿಯು ಒಂದು ಕಡೆಯ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ ವಾಪಸ್ ನುಗ್ಗುತ್ತದೆ.
ಈ ವೇಳೆ ಪ್ರಶಾಂತ್ನ ಮೈಮೇಲೆ ಹಾರಿ ಎದೆ ಮೇಲೆ ಕಾಲಿಟ್ಟು ಮುಂದಕ್ಕೆ ಹೋದ ಹೋರಿ. ಈ ಸಂದರ್ಭದಲ್ಲಿ ಪ್ರಶಾಂತ್ ಗಂಭೀರ ಗಾಯ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾದೇ ಪ್ರಶಾಂತ್ ಸಾವಿಗೀಡಾಗಿದ್ದಾರೆ.
ಇದೇ ರೀತಿ ಸೊರಬ ತಾಲ್ಲೂಕು ಜಡೆ ಗ್ರಾಮದಲ್ಲೂ ಕೂಡ ಚಗಟೂರು ನಿವಾಸಿ ಆದಿ (20) ಎ ಓರ್ವ ಹೋರಿಹಬ್ಬಕ್ಕೆ ಬಲಿಯಾಗಿದ್ದಾನೆ.
ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಹೋರಿ ಸ್ಪರ್ಧೆಯಲ್ಲಿ ಹೋರಿ ತಿವಿದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ.
ತಾಲೂಕಿನ ಕಲ್ಮನೆ ಗ್ರಾಮದ ವಸಂತ (30) ಹೋರಿ ತಿವಿದು ಮೃತಪಟ್ಟ ವ್ಯಕ್ತಿ. ಈತ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ತೆರಳಿದ್ದು ಹೋರಿ ಕುತ್ತಿಗೆಗೆ ತಿವಿದಿದ್ದು ಗಾಯಗೊಂಡ ವಸಂತನನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್