Headlines

ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More

ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru

ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು‌ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…

Read More

ಕೋಟಿ ಹಣವಿದ್ದರೂ ತುತ್ತು ಅನ್ನಕ್ಕೆ ಪರದಾಟ : ಆಸ್ತಿ ಪಡೆದು ಕೈಕೊಟ್ಟ ಮಕ್ಕಳು – ಅನ್ನಕ್ಕಾಗಿ ಅಂಗಲಾಚುತ್ತಿರುವ ವೃದ್ದ|sadstory

ಹೊಸನಗರ : ಮನುಷ್ಯ ತನ್ನ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿ ಆಸ್ತಿಪಾಸ್ತಿಗಳನ್ನು ಗಳಿಸುವುದು ತನ್ನ ಮಕ್ಕಳು ತಾನು ಪಟ್ಟ ಕಷ್ಟ ಅನುಭವಿಸದಿರಲಿ ಹಾಗೂ ತಮ್ಮ ವೃದ್ದಾಪ್ಯ ಸ್ಥಿತಿಯಲ್ಲಿ ಆಸರೆಯಾಗಿ ಇರಲಿ ಎಂದು ತಾನೇ…ಆದರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿ ತಾನು ಗಳಿಸಿದ ಆಸ್ತಿಯೇ ವೃದ್ದರೊಬ್ಬರಿಗೆ ಮುಳುವಾಗಿ ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೌದು ಹೊಸನಗರ ಪಟ್ಟಣದಿಂದ ಸುಮಾರು 12 ಕಿಮೀ ದೂರದಲ್ಲಿರುವ ಮಳಲಿ ಗ್ರಾಮದ ಅತೀ ಶ್ರೀಮಂತರಾಗಿ ಬಾಳಿ ಬದುಕಿದ್ದ ಮಳಲಿ ಶೀನಯ್ಯನವರು ತಮ್ಮ…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಕಿಮ್ಮನೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ | ಶಿವಮೊಗ್ಗದಲ್ಲೊಂದು 7 ಚಕ್ರದ ಹೈಟೆಕ್ ಆಟೋ -ಏನಿದರ ವಿಶೇಷ??? ಸುದ್ದಿ ನೋಡಿ

ತೀರ್ಥಹಳ್ಳಿ: ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿ ಬಂಡೆಯಲ್ಲಿ ಕಾರ್ಮಿಕರಿಗೆ ಭೂ ಮತ್ತು ಗಣಿ ಅಧಿಕಾರಿಗಳು ಹಿಂಸೆ ನೀಡುತ್ತಿರುವುದನ್ನು ಖಂಡಿಸಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ನೆಡೆಸುತ್ತಿದ್ದಾರೆ.   ಗೃಹ ಸಚಿವರು ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಂಡೆ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವುದರಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಯೊಳಗಾಗಿ ಅವರ ಸಮಸ್ಯೆ ಬಗೆಹರಿಸಿದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…

Read More

ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ್ ರಾಜೀನಾಮೆ |arasalu

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್,…

Read More