Headlines

ರಿಪ್ಪನ್‌ಪೇಟೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ : ಗಮನಸೆಳೆದ ಗಣವೇಷಧಾರಿಗಳು – ಕಲ್ಲಡ್ಕ ಪ್ರಭಾಕರ್ ಭಟ್ ರವರಿಂದ ಪುಷ್ಪಾರ್ಚನೆ|RSS

ರಿಪ್ಪನ್‌ಪೇಟೆ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕರು ಪಟ್ಟಣದಲ್ಲಿ ಇಂದು ಗಣವೇಷ ಧರಿಸಿ ಪಥಸಂಚಲನ ನಡೆಸಿದರು. ಪಟ್ಟಣದ ಹೊಸನಗರ ರಸ್ತೆಯ ರಾಮಮಂದಿರದಿಂದ ಆರಂಭವಾದ ಪಥಸಂಚಲನ, ತೀರ್ಥಹಳ್ಳಿ ರಸ್ತೆ ಮಾರ್ಗವಾಗಿ ಚೌಡೇಶ್ವರಿ ಬೀದಿಯಿಂದ ಹಳೇ ಸಂತೆ ಮಾರ್ಕೇಟ್ ರಸ್ತೆಯಿಂದ ವಿನಾಯಕ ವೃತ್ತಕ್ಕೆ ಆಗಮಿಸಿ ಸಾಗರ ರಸ್ತೆಯ ಮೂಲಕ ಪಥಸಂಚಲನ ಸಾಗಿತು. ವಿನಾಯಕ ವೃತ್ತದಲ್ಲಿ ಅಲಂಕೃತ ವಾಹನದಲ್ಲಿದ್ದ ಡಾ.ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಭಾವಚಿತ್ರಕ್ಕೆ ನಾಗರೀಕರು ಮತ್ತು ಕಲ್ಲಡ್ಕ ಪ್ರಭಾಕರ್ ಭಟ್ ಪುಷ್ಪಾರ್ಚನೆ ಸಲ್ಲಿಸಿದರು.  ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar

ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…

Read More

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಅಸ್ತಿತ್ವಕ್ಕೆ |SJKPS

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ. ಹೊಸನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಘಟಕ ಅಸ್ತಿತ್ವಕ್ಕೆ ಬಂದಿತು. ನೂತನ ಅಧ್ಯಕ್ಷರಾಗಿ ವೆಂಕಟೇಶ್ ಮೂರ್ತಿ,ಉಪಾಧ್ಯಕ್ಷರಾಗಿ ನಾರಾಯಣ್ ಕಾಮತ್ ಮತ್ತು ರಫಿ ರಿಪ್ಪನ್‌ಪೇಟೆ ಪ್ರಧಾನ ಕಾರ್ಯದರ್ಶಿಯಾಗಿ ರಿ.ರಾ. ರವಿಶಂಕರ್ ಕಾರ್ಯದರ್ಶಿಯಾಗಿ ಹೆಚ್ ಎಸ್ ನಾಗರಾಜ್ ಕೋಶಾಧಿಕಾರಿಯಾಗಿ ರವಿರಾಜ್ ಎಂ.ಜಿ. ಭಟ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ದೀಪಕ್ ಸ್ವರೂಪ್…

Read More

ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ  ಹೆಚ್.ಎಸ್. ದಿನೇಶ್‌ಗೌಡ ಹೇಳಿದರು. ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ…

Read More

ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ. ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ…

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara

ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…

Read More

ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ‌ ಮುಂಬೈ ಹ್ಯಾಕರ್ |Hacker

ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ.  ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More