ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ  ಹೆಚ್.ಎಸ್. ದಿನೇಶ್‌ಗೌಡ ಹೇಳಿದರು.

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ ಈ ಸಂಕೀರ್ಣಗಳಲ್ಲಿ ಕೃಷಿ ಪರಿಕರಗಳು, ಕೃಷಿ ಉತ್ಪನ್ನಗಳು ಹಾಗೂ ರೈತರಿಗೆ ಬೇಕಾದ ಅಗತ್ಯ ವಸ್ತುಗಳ ವಾಣಿಜ್ಯ ವ್ಯವಹಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಈ ಭಾಗದ ಸುತ್ತಮುತ್ತಲಿನ ಸಾರ್ವಜನಿಕರು ಇದರ ಸದ್ಬಳಕೆಯನ್ನು ಮಾಡಿಕೊಂಡು ತಮ್ಮ ದೈನಂದಿನ ವಹಿವಾಟುಗಳು ನಡೆಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ನೆಲ ಅಂತಸ್ತನ್ನು ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಮತ್ತು ಮೊದಲ ಅಂತಸ್ತನ್ನು ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ, ಎರಡನೇ ಅಂತಸ್ತನ್ನು ಶಾಸಕ ಹರತಾಳು ಹಾಲಪ್ಪನವರು ಉದ್ಘಾಟನೆ ನೆರವೇರಿಸುವರು.ಶಿಲಾಫಲಕ ಅನಾವರಣವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಎನ್. ಸುಧೀರ್, ಎಂ.ಎಂ ಪರಮೇಶ, ನಾಬಾರ್ಡ್ ಅಧಿಕಾರಿ ಬಿ. ರವಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ನಾಗೇಶ ಡೋಂಗ್ರೆ, ಸಹಕಾರ ಸಂಘಗಳ ಉಪನಿಬಂಧಕ ಜಿ. ವಾಸುದೇವ, ಸಹಾಯಕ ನಿಬಂಧಕ ಗೋಪಾಲ ಸಿ., ಅಭಿವೃದ್ಧಿ ಅಧಿಕಾರಿ ವೆಂಕಟಾಚಲಪತಿ ಗ್ರಾ.ಪಂ. ಅಧ್ಯಕ್ಷರಾದ ವನಿತಾ ಗಂಗಾಧರ, ಸದಸ್ಯರಾದ ಚೂಡಾಮಣಿ ಮತ್ತು ನಾಗರತ್ನ ಉಪಸ್ಥಿತಲಿರುವರು. ಈ ಎಲ್ಲಾ ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿನಂತಿಸಿದರು.

ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಎನ್. ಸುಧೀರ್, ಎಂ.ಎಂ ಪರಮೇಶ, ಸಂಘದ ಉಪಾಧ್ಯಕ್ಷರಾದ ಗಂಗಾಧರ, ನಿರ್ದೇಶಕರಾದ ಲೋಕಪ್ಪಗೌಡ, ಕೆ.ಜಿ. ಬಸಪ್ಪ, ಈ.ಡಿ. ಮಂಜುನಾಥ, ಕೆ.ಆರ್. ಮಂಜುನಾಥ, ಹೆಚ್.ಎನ್. ಅಭಿಷೇಕ್, ಗೌರಮ್ಮ, ಶೇಷಮ್ಮ ಯಂಕಪ್ಪ, ಮಹಮ್ಮದ್‌ಸಾಬ್, ಕ್ಷೇತ್ರಾಧಿಕಾರಿ ಇಂದ್ರಕುಮಾರ, ಕಗ್ಗಲಿ ಲಿಂಗಪ್ಪ, ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

5 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

22 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

24 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago