ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.

ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ ಕೆಲಸ ವ್ಯಾಪಾರವೂ ಅಲ್ಲ, ದೇವಸ್ಥಾನ ನಿರ್ಮಾಣವೂ ಅಲ್ಲ,ಸುಶಾಸನ ರಚಿಸುವುದಾಗಿದೆ. ಶಾಸಕನಾಗಿ, ಸಮಿತಿಗೆ ಗೌರವಾಧ್ಯಕ್ಷನಾಗಿ ಪರವಿರೋಧಗಳಿಲ್ಲದೆ ಸಹಕರಿಸುತ್ತೇನೆ. ದೇವಸ್ಥಾನದ ಅಭಿವೃದ್ಧಿಯಲ್ಲಿ ಯಾವುದೇ ಗೊಂದಲಗಳಿಲ್ಲಿದೆ ನಿರ್ವಹಿಸಬೇಕಿರುವುದರಿಂದ ಪ್ರತಿಯೊಬ್ಬ ಭಕ್ತರ ಸಹಕಾರವು ಅಗತ್ಯವಿದೆ.

ಕ್ಷೇತ್ರದ ಪೌರಾಣಿಕ ಇತಿಹಾಸವನ್ನು ಅರಿತ ಹಿಂದಿನ ಹಿರಿಯರು
ಇಪ್ಪತ್ತೈದು ಎಕರೆ ಜಾಗವನ್ನು ದೇವಸ್ಥಾನದ ಅಭಿವೃದ್ಧಿಗಾಗಿ ಮಂಜೂರುಮಾಡಿಸಿದ್ದಾರೆ. ಆ ಜಾಗದಲ್ಲಿ ಸುವ್ಯವಸ್ಥಿತ ಯೋಜನೆಯೊಂದಿಗೆ ನೀಲನಕ್ಷೆ ತಯಾರಿಸುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು. ಅಭಿವೃದ್ಧಿಯಲ್ಲಿ ಸುಂದರವಾಗಿರುವ ಪರಿಸರವನ್ನು ಉಳಿಸಿಕೊಂಡು ಪ್ರಕೃತಿ ಸೌಂದರ್ಯಕ್ಕೂ
ಆದ್ಯತೆ ನೀಡಲಾಗುವುದು. ನಿಗಧಿತ ಪ್ರದೇಶವನ್ನು ಸರ್ವೆಮಾಡಿಸಿ ಹದ್ದುಬಸ್ತು ಮಾಡುವಂತೆ ತಹಶೀಲ್ದಾರ್‌ರವರಿಗೆ ಸೂಚಿಸಿದ್ದೇನೆ.

ಮುಂದಿನ ಇಪ್ಪತೈದು ವರ್ಷದಲ್ಲಿ ನೂರಾರು ವರ್ಷದ ದೂರಾಲೋಚನೆಯ ಯೋಜನೆ ನೇರವೇರಿಸಲಾಗುವುದು.


ನೂತನ ಶಿಲಾಮಯ ದೇವಸ್ಥಾನ ನಿರ್ಮಾಣಕ್ಕೆ 5 ಕೋಟಿ ರೂಪಾಯಿಗಳ ಅಂದಾಜು ವೆಚ್ಚವನ್ನು ಪರಿಗಣಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಒಂದು ವರ್ಷದಲ್ಲಿ ದೇವಸ್ಥಾನದ ಮುಖಮಂಟಪ ನಿರ್ಮಾಣ, 5 ವರ್ಷದಲ್ಲಿ ಅಮ್ಮನಘಟ್ಟದ ಸಮಗ್ರಅಭಿವೃದ್ಧಿ, 25 ವರ್ಷದಲ್ಲಿ ಸಾವಿರಾರು ಜನರನ್ನು ಪ್ರತಿನಿತ್ಯ ಆಕರ್ಷಿಸುವ ಪ್ರೇಕ್ಷಣೀಯ ಸ್ಥಳವನ್ನಾಗಿ ಮಾರ್ಪಡಿಸಲಾಗುವುದು. ಇದಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೊಡಿಸಲು ಶ್ರಮವಹಿಸುತ್ತೇನೆ. ದಾನಿಗಳು ಹಾಗೂ ಭಕ್ತರ ಸಹಕಾರದಿಂದ 5 ವರ್ಷದಲ್ಲಿ 10 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಅಭಿವೃದ್ಧಿ ಪಡಿಸಲಾಗುವುದು.

ಡಿಸೆಂಬರ್ 28 ರಂದು ನೂತನ ದೇವಸ್ಥಾನದ ನಿರ್ಮಾಣಕ್ಕೆ ಭೂಮಿ ಪೂಜೆ ನಿಗಧಿಪಡಿಸಲಾಗಿದ್ದು, ಈ ಪುಣ್ಯಕಾರ್ಯಕ್ಕೆ ಶ್ರೀರಾಮಚಂದ್ರಪುರ ಮಠದ ಶ್ರೀರಾಘವೇಶ್ವರ ಸ್ವಾಮೀಜಿ ಸಾನಿಧ್ಯವಹಿಸುವರು.

ಸಮಾರಂಭದಲ್ಲಿ ಗೃಹ ಸಚಿವರ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮುಂತಾದ ನಾಯಕರುಗಳು ಪಾಲ್ಗೊಳ್ಳುವರೆಂದರು.

ಈ ಸಂಧರ್ಭದಲ್ಲಿ ದೇವಸ್ಥಾನದ ನೀಲನಕ್ಷೆಯನ್ನು ಶಾಸಕರು ವೀಕ್ಷಿಸಿದರು.

ತಹಶೀಲ್ದಾರ್ ರಾಜೀವ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ಸ್ವಾಮಿರಾವ್, ಕಲಗೋಡು ರತ್ನಾಕರ, ಮಾಜಿ ಶಾಸಕ ಕುಮಾರಸ್ವಾಮಿ,ಸುಧೀರ, ಸರೋಜಮ್ಮ, ಪುಟ್ಟಪ್ಪ, ಸಂತೋಷ, ಶ್ರೀನಿವಾಸ, ವಿಜೇಂದ್ರರಾವ್,ಕಲ್ಯಾಣಪ್ಪಗೌಡ, ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಬಂಡಿ ರಾಮಚಂದ್ರ,ಚಂದ್ರಮೌಳಿ, ಬೆಳಗೋಡು ಗಣಪತಿ,ಉಮೇಶ್ ಜಾಗದ್ದೆ,ಸಿವಿಲ್ ಇಂಜಿನಿಯರ್ ರಾಘವೇಂದ್ರ ರಿಪ್ಪನ್‌ಪೇಟೆ, ಮೇಘರಾಜ್ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

4 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

6 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

9 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

10 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

10 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

10 hours ago