ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.


ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ. ಮನುಷ್ಯ ಉರಿಯುತ್ತಿದ್ದಾನೆ ಹೊರತು ಬೆಳಗುತ್ತಿಲ್ಲ. ಆಧ್ಯಾತ್ಮ ಜ್ಞಾನದ ಕೊರತೆಯಿಂದಾಗಿ ಮನುಷ್ಯ ಅನೇಕ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾನೆ. ಹಚ್ಚುವುದಾದರೆ ದೀಪ ಹಚ್ಚು. ಆದರೆ ಬೆಂಕಿ ಹಚ್ಚಬೇಡ. ಆರಿಸುವುದಾದರೆ ಬೆಂಕಿ ಆರಿಸು. ಆದರೆ ದೀಪ ಆರಿಸಬೇಡ ಎಂದು ಆಚಾರ್ಯರು ಸ್ಪಷ್ಟವಾಗಿ ಹೇಳುತ್ತಾರೆ. ಮನುಷ್ಯನ ಮನಸ್ಸು ಜೀವನ ಮತ್ತು ಶ್ವೇಚ್ಛಾಚಾರ ಹೊಂದಿ ಸಂಕುಚಿತಗೊಂಡು ಅನಾಗರಿಕ ಮಾನಸಿಕ ಶಾಂತಿ ಕಳೆದುಕೊಳ್ಳುತ್ತಿದ್ದಾನೆ.


ಮಳಲಿ ಸಂಸ್ಥಾನ ಮಠದಲ್ಲಿ ಪ್ರತಿ ವರ್ಷ ಕಾರ್ತೀಕ ಧರ್ಮ ದೀಪೋತ್ಸವ ಸಮಾರಂಭ ಭಕ್ತ ಸಂಕುಲದ ಸಹಕಾರದಿಂದ ವಿಜೃಂಭಣೆಯಿಂದ ಜರುಗುತ್ತಿರುವುದು ತಮಗೆ ಸಂತೋಷ ತಂದಿದೆ. ಮಠಾಧ್ಯಕ್ಷರಾದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಭಕ್ತರ ಭಾವನೆಗಳಿಗೆ ಸ್ಪಂದಿಸಿ ಅತ್ಯುತ್ತಮ ಮಾಡುತ್ತಿದ್ದಾರೆ. ಶ್ರೀಗಳವರ ಅಧಿಕಾರದ ಅವಧಿಯಲ್ಲಿ ಶ್ರೀ ಮಠ ಇನ್ನಷ್ಟು ಮತ್ತಷ್ಟು ಬೆಳೆದು ಭಕ್ತ ಸಮೂಹದ ಶ್ರೇಯಸ್ಸಿಗೆ ದಾರಿದೀಪವಾಗಲೆಂದರು.




ಸಮಾರಂಭ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಭಾರತೀಯ ಸಂಸ್ಕೃತಿಯ ಪುನಶ್ವೇತನಕ್ಕೆ ಮಠಗಳ ಕೊಡುಗೆ ಅಮೂಲ್ಯ, ಜಾತಿ ಮತ ಪಂಥಗಳ ಗಡಿ ಮೀರಿ ಭಾವೈಕ್ಯತೆ ಮತ್ತು ಸಾಮರಸ್ಯ ಬದುಕಿಗೆ ಶ್ರಮಿಸುತ್ತಿರುವುದು ಹೆಮ್ಮೆಯ ಸಂಗತಿ. ಮಲೆನಾಡಿನ ಮಡಿಲಲ್ಲಿರುವ ಮಳಲಿ ಮಠ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದು ಸರ್ವ ಭಕ್ತರಿಗೆ ಸನ್ಮಾರ್ಗ ದರ್ಶನ ನೀಡುತ್ತಿರುವುದು ಸಂತಸ ತಂದಿದೆ ಎಂದರು.




ಬೇಲೂರು ಶಾಸಕ ಕೆ.ಎಸ್.ಲಿಂಗೇಶ, ಸಾಗರ ಶಾಸಕ ಹರತಾಳು ಹಾಲಪ್ಪ, ಎಸ್.ಎಸ್.ಜ್ಯೋತಿಪ್ರಕಾಶ,ಆರ್ ಎನ್ ಮಂಜುನಾಥ್ ಗೌಡ, ಉದ್ಯಮಿ ಕೆ.ಆರ್.ಪ್ರಕಾಶ, ಹೆಚ್.ಎಸ್.ಜಗದೀಶ ,ಬಿ ಯುವರಾಜ, ಕೆ.ಎಂ.ಚನ್ನಬಸಪ್ಪಗೌಡ್ರು, ವೀರೇಶ ಆಲವಳ್ಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಬಂಕಾಪುರ, ಕವಲೇದುರ್ಗ, ಬೇರುಗಂಡಿ, ಸಿದ್ಧರಬೆಟ್ಟ, ಶಾಂತಪುರ, ಕೋಣಂದೂರು, ಸಂಗೊಳ್ಳಿ, ಕಡೇನಂದಿಹಳ್ಳಿ, ಹನುಮಾಪುರ, ಹಾರನಹಳ್ಳಿ, ಕುಮಾರಪಟ್ಟಣ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

11 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

19 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago