ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ.
ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ.
ಈ ಕುರಿತು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ