ಕಸ್ತೂರಿ ಕನ್ನಡ ಸಂಘದ ಆರೋಪ ರಾಜಕೀಯ ಪ್ರೇರಿತ – ನಿರೂಪ್ ಕುಮಾರ್|Ripponpet

ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘದವರು ಕಳೆದ 28 ವರ್ಷಗಳಿಂದ ನಾಡು- ನುಡಿ ಜಲಕ್ಕೆ ಶ್ರಮಿಸಿದ ಕಲಾ ಕೌಸ್ತುಭ ಕನ್ನಡ ಸಂಘದ ಮೇಲೆ ಆರೋಪಿಸಿರುವುದು ರಾಜಕೀಯ ಪ್ರೇರಿತ ಎಂದು ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಹೇಳಿದರು.



ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು‌ ಕಸ್ತೂರಿ ಕನ್ನಡ ಸಂಘದವರು ಇಂದು ಪತ್ರೀಕಾ ಗೋಷ್ಟಿ ನಡೆಸಿ ಕಲಾ ಕೌಸ್ತುಭ ಕನ್ನಡ ಸಂಘವು ಅನ್ಯ ಭಾಷೆಗಳ ವೈಭವಿಕರಿಸುತ್ತಿದೆ ಎಂದು ಹೇಳಿರುವುದು‌ ಮೇಲ್ನೋಟಕ್ಕೆ ರಾಜಕೀಯ ಪ್ರೇರಿತ ವಾಗಿದ್ದು,ಈ ಬಾರಿ ನಮ್ಮ ಸಂಘದಿಂದ ಅದ್ದೂರಿಯಾಗಿ ಎರಡು ದಿನ ಕನ್ನಡ ಸಂಭ್ರಮ ಮತ್ತು ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ನಡೆಸುತ್ತಿದ್ದು ಅದರ ಯಶಸ್ಸನ್ನು ಸಹಿಸದವರು ಈ ತರಹ ವೃಥಾ ಆರೋಪ ಮಾಡುತಿದ್ದಾರೆ.

ನಾವು ಭಾರತೀಯರೆಂದ ಮೇಲೆ ಎಲ್ಲಾ ಭಾಷೆಗಳನ್ನು ಪ್ರೀತಿಸಿ ಜೊತೆಯಲ್ಲಿ ನಮ್ಮ ಕನ್ನಡ ಭಾಷೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾಗಿದೆ.ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಯಾವುದೇ ಕಾರ್ಯಗಳನ್ನು ಕಲಾ ಕೌಸ್ತುಭ ಸಂಘ ಮಾಡುವುದಿಲ್ಲ,ಕೇವಲ ವಿರೋಧಿಸುವ ಮನಸ್ಥಿತಿಯವರು ಈ ರೀತಿ ಆರೋಪಿಸುತಿದ್ದಾರೆ.




ಒಂದು ಪಕ್ಷದ ಇಬ್ಬರು ಟಿಕೆಟ್ ಆಕಾಂಕ್ಷಿಗಳನ್ನು ನಮ್ಮ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರಿಂದ ಒಂದು ಬಣದ ಕೆಲ ಮುಖಂಡರು ಈ ರೀತಿಯ ಆರೋಪ ಮಾಡುತಿದ್ದಾರೆ.ಅವರಿಗೆ ಕನ್ನಡದ ಬಗ್ಗೆ ಅಷ್ಟು ಅಭಿಮಾನವಿದ್ದಲ್ಲಿ ನವೆಂಬರ್ ತಿಂಗಳಲ್ಲಿ ಹಿಂದಿ ಮತ್ತು ಪರಭಾಷೆ ಚಲನಚಿತ್ರ ಪ್ರದರ್ಶನವನ್ನು ನಿಲ್ಲಿಸಲಿ ಹಾಗೇಯೆ ಶಾಲಾ ಕಾಲೇಜುಗಳಲ್ಲಿ ಇಂಗ್ಲಿಷ್, ಹಿಂದಿ ಪಾಠವನ್ನು ನವೆಂಬರ್ ತಿಂಗಳಲ್ಲಿ‌ ಭೋಧಿಸುವುದನ್ನು ತಡೆಯಲಿ ಎಂದರು.

ಕಲಾ ಕೌಸ್ತುಭ ಕನ್ನಡ ಸಂಘ ಎಂದಿಗೂ ಕನ್ನಡಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ ಮುಂದೆ ಮಾಡುವುದು ಇಲ್ಲಾ,ಹಾಗೇಯೆ ನಮ್ಮ ಸಂಘಕ್ಕೆ ಜಾತಿ‌,ಮತ,ಪಕ್ಷ ಭೇದವಿಲ್ಲ ಎಂದರು.

ಆಳ್ವಾಸ್ ನುಡಿಸಿರಿಯ ರೂವಾರಿ ಸತೀಶ್ ಎನ್ ಮಾತನಾಡಿ ಆಳ್ವಾಸ್ ಕಾರ್ಯಕ್ರಮ ರಾಜ್ಯಾದ್ಯಂತ ಇದೇ ತಿಂಗಳಿನಲ್ಲಿ ಕನ್ನಡ ಪರ ಸಂಘಟನೆಗಳ ಸಹಕಾರದಿಂದ ಹಲವಾರು ಕಡೆ ಪ್ರದರ್ಶನಗೊಳ್ಳುತ್ತಿದೆ.ನ 25 ರಂದು ಹೊನ್ನಾಳಿಯಲ್ಲಿ ಮತ್ತು ನ 26 ರಂದು ಭದ್ರಾವತಿಯಲ್ಲಿ ಕನ್ನಡ ಸಂಘದ ವತಿಯಿಂದ ಆಳ್ವಾಸ್ ಕಾರ್ಯಕ್ರಮ ನಡೆಯುತ್ತಿದೆ.ಎಲ್ಲೂ ಇಲ್ಲದ ಕನ್ನಡ ಮಡಿವಂತಿಕೆಯನ್ನು ಇಲ್ಲಿ ಕೆಲವರು ತೋರ್ಪಡಿಸುತ್ತಿರುವುದು ಕೇವಲ ರಾಜಕೀಯ ಪ್ರೇರಿತವಾಗಿದೆ.




ಯಾರು ಏನೇ ಕುತಂತ್ರ ನಡೆಸಿದರೂ ಕಲಾ ಕೌಸ್ತುಭ ಸಂಘದ ಎರಡು ದಿನದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಆಳ್ವಾಸ್ ನುಡಿಸಿರಿ ಕಾರ್ಯಕ್ರಮಕ್ಕೆ ಜನತೆ ಬೆಂಬಲ ಸೂಚಿಸಿದ್ದು ಅದ್ದೂರಿಯಾಗಿ ನಡೆಯುತ್ತದೆ ಎಂದರು.

ಗೋಷ್ಠಿಯಲ್ಲಿ ಕಲಾ ಕೌಸ್ತುಭ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ರವಿಚಂದ್ರ, ಸಮಿತಿಯ ಎಂ ಬಿ ಮಂಜುನಾಥ್, ಆರ್ ಟಿ ಗೋಪಾಲ್ ,ಸುರೇಶ್ ಸಿಂಗ್ , ಉಮಾಸುರೇಶ್ ,ಪದ್ಮಾ ಸುರೇಶ್,ಲೀಲಾ ಆರ್ ಶಂಕರ್,ಅಶ್ವಿನಿ ರವಿಶಂಕರ್ ,ಲಕ್ಷ್ಮಿ ಶ್ರೀನಿವಾಸ್,ಶೈಲಾ ಆರ್ ಪ್ರಭು  ಇನ್ನಿತರರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

===============≠==================================
ರಿಪ್ಪನ್‌ಪೇಟೆಯ ಆಳ್ವಾಸ್ ನುಡಿಸಿರಿ ಘಟಕ ಮತ್ತು ಕಲಾ ಕೌಸ್ತುಭ ಕನ್ನಡ ಸಂಘದ ಕಾರ್ಯಕಾರಿ ಸದಸ್ಯರುಗಳು ಇಂದು ಮೋಹನ್ ಆಳ್ವಾ ಅವರನ್ನು ಭೇಟಿ ಮಾಡಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮದ ಪೂರ್ವಭಾವಿ ತಯಾರಿ ಬಗ್ಗೆ ಚರ್ಚಿಸಿ ಕಾರ್ಯಕ್ರಮಕ್ಕೆ ಹೃದಯಪೂರ್ವಕವಾಗಿ ಆಹ್ವಾನಿಸಿದರು.

ಈ ಸಂಧರ್ಭದಲ್ಲಿ ಸತೀಶ್ ಎನ್ ,ಈಶ್ವರ್ ,ಸುಧೀರ್ ಪಿ ಇದ್ದರು.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

15 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

16 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

20 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

22 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

22 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago