ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು ಸಿಗರೇಟ್ ಮಾರುತ್ತಾರೆ, ಅದು ಕ್ಯಾನ್ಸರ್‌ಕಾರಕ. ಮದ್ಯ ಮಾರಾಟ ಮಾಡುತ್ತಾರೆ ಎಂದು ಹೇಳಿಕೆ ನೀಡಿರುವುದು ಅವರ ಪ್ರಬುದ್ಧತೆಗೆ ತಕ್ಕದ್ದಲ್ಲ. ಟೀಕೆ ಟಿಪ್ಪಣಿ ರಾಜಕೀಯದಲ್ಲಿ ಮಾಮೂಲಿ. ಅದರೆ ಕೀಳು ಮನಸ್ಸಿನ ಪ್ರದರ್ಶನ ಮಾಡಬಾರದು ಎಂದು ಹೇಳಿದರು.

ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸೇರಲು ಕಾಗೋಡು ಮೊರೆ ಹೋಗಿದ್ದನ್ನು ಬಹುಶಃ ಹಾಲಪ್ಪಗೆ ಮರೆತು ಹೋಗಿದೆ. ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ. ಜಿ. ಪರಮೇಶ್ವರ್ ಅವರ ಜೊತೆ ಹಾಲಪ್ಪ ಕಾಂಗ್ರೆಸ್ ಕಚೇರಿಗೂ ಹೋಗಿದ್ದರು. ಇದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿಯಾಗಿದ್ದೇನೆ ಎಂದರು.

ರಾಜ್ಯದಲ್ಲಿಯೇ ಅತಿಹೆಚ್ಚು ಬಡವರಿಗೆ, ದೀನದಲಿತರಿಗೆ ಭೂಮಿ ಹಕ್ಕು ನೀಡಿದವರೆಂದು ಕಾಗೋಡು ಅವರ ಹೆಸರು ದಾಖಲಾಗಿದೆ. ಕಾಗೋಡು ಅವರಾಗಲಿ, ಅವರ ಕುಟುಂಬವಾಗಲಿ ಹಾಲಪ್ಪ ಬಳಿ ಯಾವುದೇ ಸಹಾಯ ಕೇಳಿಲ್ಲ. ಹಾಲಪ್ಪ ಅವರು ಅನಗತ್ಯವಾಗಿ ತಮ್ಮ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಬೇಕು. ಕಾಗೋಡು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಆತಂಕ ಮತ್ತು ಸೋಲಿನ ಭೀತಿಯಿಂದ ಹರತಾಳು ಇಂತಹ ಮಾತು ಆಡುತ್ತಿದ್ದಾರೆ ಎಂದರು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಗೋಡು ಪುತ್ರಿ ಡಾ. ರಾಜನಂದಿನಿ ಮಾತನಾಡಿ, ನಮ್ಮ ತಂದೆ ರಾಜಕೀಯ ಜೀವನದಲ್ಲಿ ಎಂದಿಗೂ ವೈಯಕ್ತಿಕ ಹಿತಾಸಕ್ತಿ ಬಗ್ಗೆ ಗಮನ ಹರಿಸಿದವರಲ್ಲ. 1972ರಲ್ಲಿ ಅಜ್ಜ ಸಂಜೀವ್‌ರಾವ್ ಅವರು ನಡೆಸಿಕೊಂಡು ಬರುತ್ತಿರುವ ಯುನೈಟೆಡ್ ಟ್ರೇಡಿಂಗ್ ಕಂಪನಿ, ಶಾಂತಾ ಹೋಟೆಲ್ ತಂದೆ ಹೆಸರಿಗೆ ಗಿಫ್ಟ್ ಡೀಡ್ ಮಾಡಿ ಕೊಡಲಾಗಿದೆ. ಸಿಗರೇಟ್ ಸೇವನೆ ಹಾನಿಕಾರಕ ಎಂದು ಪ್ಯಾಕ್ ಮೇಲೆ ಬರೆದಿರುತ್ತಾರೆ. ಶಾಸಕರಿಗೆ ತಾಕತ್ತು ಇದ್ದರೆ ಕೇಂದ್ರದ ಮೇಲೆ ಒತ್ತಡ ತಂದು ಸಿಗರೇಟ್ ಮಾರಾಟ ರದ್ದು ಮಾಡಿಸಲಿ ಎಂದು ಸವಾಲು ಹಾಕಿದರು.

ನಮ್ಮ ತಂದೆಯವರಾಗಲಿ, ನಾವಾಗಲಿ ಬಾರ್ ಲೈಸೆನ್ಸ್‌ಗಾಗಿ ಶಾಸಕರ ಬಳಿ ಯಾವತ್ತೂ ಬೇಡಿಕೆ ಇರಿಸಿಲ್ಲ. ಪರವಾನಿಗೆಯನ್ನು ಅಬ್ಕಾರಿ ಜಿಲ್ಲಾಧಿಕಾರಿ ಮೂಲಕ ತಂದಿದ್ದೇವೆಯೇ ಹೊರತು ಇದರಲ್ಲಿ ಹಾಲಪ್ಪ ಕೊಡುಗೆ ಏನಿಲ್ಲ. ಕಾಗೋಡು ತಿಮ್ಮಪ್ಪ ಅವರು ಯಾವುದೇ ಅಕ್ರಮ ಆಸ್ತಿ ಮಾಡಿಲ್ಲ. ನಮ್ಮ ತಂದೆಯವರ ಆಸ್ತಿ ಎಷ್ಟು, ಹಾಲಪ್ಪ ಅವರ ಆಸ್ತಿ ಎಷ್ಟು ಎನ್ನುವುದನ್ನು ಒಂದೇ ವೇದಿಕೆಯಲ್ಲಿ ಮುಖಾಮುಖಿ ಚರ್ಚೆ ಮಾಡಲು ನಾವು ಸಿದ್ದರಿದ್ದೇವೆ ಎಂದು ಘೋಷಿಸಿದರು.

ಗೋಷ್ಠಿಯಲ್ಲಿ ಮಂಡಗಳಲೆ ಗಣಪತಿ, ಮಧುಮಾಲತಿ, ಮಹಾಬಲ ಕೌತಿ, ಕೆ.ಹೊಳೆಯಪ್ಪ, ಡಿ.ದಿನೇಶ್, ಗಣಾಧೀಶ್ ಹಾಜರಿದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

3 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

5 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

8 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

8 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

8 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

9 hours ago