ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ ಇಂದು ಸಂಜೆ ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು.
ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು.
ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡರು.
ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮುಖಂಡರಾದ ಕಗ್ಗಲಿ ಲಿಂಗಪ್ಪ, ಸುರೇಶ್ ಸಿಂಗ್, ಆರ್ ಟಿ ಗೋಪಾಲ್,ದೇವರಾಜ್ ,ನಿರೂಪ್ , ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಗೃಹ ಸಚಿವರ ಆಗಮನದ ಹಿನ್ನಲೆಯಲ್ಲಿ ವಿನಾಯಕ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.