ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ನಗರದಲ್ಲಿರುವ ಶಿವಪ್ಪ ನಾಯಕ ಮಾಲ್ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ ಎಂ ಬಿ ಚನ್ನವೀರಪ್ಪ ಮತ್ತಿತರರು ಸಾಥ್ ನೀಡಿದರು.
ಸೆಲ್ಫಿಗೆ ಮುಗಿಬಿದ್ದ ಯುವಕರು -ಯುವತಿಯರು
ಯಡಿಯೂರಪ್ಪ ಅವರು ಮಾಲ್ ನಲ್ಲಿ ಸಿಕ್ಕ ಪುಟ್ಟ ಮಗುವಿನ ಕೈ ಹಿಡಿದು ಶೇಕ್ ಹ್ಯಾಂಡ್ ಮಾಡಿ ಖುಷಿಪಟ್ಟರು. ಹಲವಾರು ಮಂದಿ ಬಿಎಸ್ವೈ ಅವರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಫೋಟೊ ತೆಗೆಸಿಕೊಳ್ಳಲು ಮುಂದಾದ ಪ್ರತಿಯೊಬ್ಬರಿಗೂ ಬಿಎಸ್ವೈ ಸ್ಪಂದಿಸಿದರು. ಭಾರತ್ ಮಲ್ಟಿಪ್ಲೆಕ್ಸ್ನಲ್ಲಿ ಅವರು ಚಿತ್ರ ವೀಕ್ಷಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್