ಖಾಸಗಿ ಬಸ್ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಎಚ್ಚರಿಸಿದರು.
ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಎಚ್ಚರಿಸಿದರು.
ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್ಟಿಒ ಗಂಗಾಧರ್ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಹಾಗೂ ಅವರಿಗೆ ಯಾವುದೇ ತೊಂದರೆಯಾಗದಂತೆ ನಡೆದುಕೊಳ್ಳಲು ತಿಳಿಸಿದರು.
ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುಲು ವೇಗ ಮಿತಿ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಸ್ ಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೇ, ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲುಗಡೆ ಮಾಡಲು ಹೇಳಿದರು.
ಬಸ್ ಗಳಲ್ಲಿ ಸರಕು ಸಾಗಾಣಿಕೆಯ ಸಮಯದಲ್ಲಿ ಗಮನ ಹರಿಸುವುದು. ಒಂದು ವೇಳೆ ಯಾವುದೇ ಅನುಮಾನಾಸ್ಪದ ಸರಕು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದರು.
ಬಸ್ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಕಂಡುಬಂದಲ್ಲಿ ಸಂಬಂಧಪಟ್ಟ ಖಾಸಗಿ ಬಸ್ಗಳ ಮಾಲೀಕರೇ ಹೊಣೆಗಾರರಾಗಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಉಪವಿಭಾಗದ ಡಿವೈಎಸ್ಪಿ ಬಾಲರಾಜ್, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ಮತ್ತು ಪಿಎಸ್ಐ (ಸಂಚಾರ) ರವರುಗಳು ಉಪಸ್ಥಿತರಿದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…