ಖಾಸಗಿ ಬಸ್ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಎಚ್ಚರಿಸಿದರು.
ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಎಚ್ಚರಿಸಿದರು.
ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್ಟಿಒ ಗಂಗಾಧರ್ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಹಾಗೂ ಅವರಿಗೆ ಯಾವುದೇ ತೊಂದರೆಯಾಗದಂತೆ ನಡೆದುಕೊಳ್ಳಲು ತಿಳಿಸಿದರು.
ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುಲು ವೇಗ ಮಿತಿ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಸ್ ಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೇ, ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲುಗಡೆ ಮಾಡಲು ಹೇಳಿದರು.
ಬಸ್ ಗಳಲ್ಲಿ ಸರಕು ಸಾಗಾಣಿಕೆಯ ಸಮಯದಲ್ಲಿ ಗಮನ ಹರಿಸುವುದು. ಒಂದು ವೇಳೆ ಯಾವುದೇ ಅನುಮಾನಾಸ್ಪದ ಸರಕು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದರು.
ಬಸ್ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಕಂಡುಬಂದಲ್ಲಿ ಸಂಬಂಧಪಟ್ಟ ಖಾಸಗಿ ಬಸ್ಗಳ ಮಾಲೀಕರೇ ಹೊಣೆಗಾರರಾಗಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಉಪವಿಭಾಗದ ಡಿವೈಎಸ್ಪಿ ಬಾಲರಾಜ್, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ಮತ್ತು ಪಿಎಸ್ಐ (ಸಂಚಾರ) ರವರುಗಳು ಉಪಸ್ಥಿತರಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…