ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ.
ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ ದಾಳಿ ನಡೆಸಿವೆ.
ದಾಳಿಯಲ್ಲಿ ಅಪಾರ ಪ್ರಮಾಣದಲ್ಲಿ ಮದ್ಯ ಪತ್ತೆಯಾಗಿವೆ.
ಕಿನಾರಾ ಹೋಟೆಲ್, ಸರೋವರ ಹೋಟೆಲ್ , ಭೂಮಿಕ ಹೋಟೆಲ್, ಗ್ರೀನ್ ಫಿಶ್ ಲ್ಯಾಂಡ್ ಹೋಟೆಲ್, ವನಶ್ರೀಹೋಟೆಲ್ ಗಳ ಮೇಲೆ ಒಟ್ಟು 07 ಅಬಕಾರಿ ಪ್ರಕರಣಗಳನ್ನು ದಾಖಲಿಸಲಾಯಿತು. ಸದರಿ ದಾಳಿಯಲ್ಲಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಹಾಲಾನಾಯ್ಕ್.ಎನ್, ಮಂಜುನಾಥ ಜಿ.ಬಿ ಹಾಗೂ ಸಿಬ್ಬಂದಿಗಳು ಪಾಲ್ಗೋಂಡಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್