ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ
ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.
ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ.
ಕೋಳಿ ವ್ಯಾಪಾರದ ಅಂಗಡಿಗೆ ಲೈಸನ್ಸ್ ನೀಡುವ ಸಂಬಂಧ ಹರೀಶ್ ಹಣದ ಬೇಡಿಕೆಯನ್ನು ಇಟ್ಟಿದ್ದ. ಇದರಿಂದ ಬೇಸತ್ತು ಲೋಕಾಯುಕ್ತ ಮೊರೆಗೆ ಕೋಳಿ ವ್ಯಾಪಾರಿ ಹೋಗಿದ್ದ. ಇಂದು ಹಣ ಪಡೆಯುವಾಗ ಲೋಕಾಯುಕ್ತ ಎಸ್ಪಿ ಮೃತ್ಯುಂಜಯ ದಾಳಿ ನೆಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ನೋಡುತ್ತಿದ್ದಂತೆ ಹಣ ಸುಡಲು ಹರೀಶ್ ಯತ್ನಿಸಿದ್ದು ಹಣದ ಕಂತೆಗಳು ಕೂಡ ಭಾಗಶಃ ಸುಟ್ಟುಹೋಗಿವೆ.
ಅಂಗಡಿ ನಡೆಸಲು ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು, ಪ್ರತಿ ತಿಂಗಳು 3 ಸಾವಿರ ರೂ. ಹಣ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡ ಸೂಚಿಸಿದ್ದಾರೆ. ಇದು ಕಷ್ಟವಾಗಲಿದೆ ಎಂದು ಅಹ್ಮದ್ ಅಬ್ದುಲ್ ತಿಳಿಸಿದ್ದಾರೆ. ಆಗ 50 ಸಾವಿರ ರೂ. ಕೊಡುವಂತೆ ಹರೀಶ್ ಗೌಡ ತಿಳಿಸಿದ್ದಾರೆ.
ಸದ್ಯ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡನನ್ನ ಬಂಧಿಸಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಡಿ.ವೈ.ಎಸ್.ಪಿ ಮೃತ್ಯುಂಜಯ.ಎನ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಇನ್ಸ್ ಪೆಕ್ಟರ್ ರಾಧಾಕೃಷ್ಣ, ಇನ್ಸ್ ಪೆಕ್ಟರ್ ಹೆಚ್.ಎಂ.ಜಗನ್ನಾಥ, ಸಿಬ್ಬಂದಿ ಪ್ರಸನ್ನ, ಬಿ.ಲೋಕೇಶಪ್ಪ, ಮಹಾಂತೇಶ, ಚನ್ನೇಶ, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ಪುಟ್ಟಮ್ಮ, ಸಾವಿತ್ರಮ್ಮ, ಗಂಗಾಧರ, ತರುಣ್ ಕುಮಾರ್, ಪ್ರದೀಪ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್