ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ ಘಟನೆಗೆ ನಾಗರಕೊಡಿಗೆ ಸಾಕ್ಷಿಯಾಗಿದೆ.
ಬಣ್ಣ ಬಣ್ಣದ ವಿನ್ಯಾಸವುಳ್ಳ ಸುಂದರ ನಟ ನಟಿಯರ ಮುಖಚಿತ್ರ ಇರುವ ಧಿರಿಸು ಧರಿಸುವ ಫ್ಯಾಶನ್ ಪ್ರಿಯರಂತೆ ಹುಳು ಹಪ್ಪಟೆಗಳು ಇದೀಗ ಶುರು ಮಾಡಿದಂತಿದೆ. ಇಲ್ಲೊಂದು ಎಲೆ ಹುಳು ಅಥವಾ ಎಲೆಕೀಟ ಎಂದು ಕರಿಯುವ ಕೀಟವೊಂದು ತನ್ನ ಮೈಯನ್ನು ಚೆಲುವೆಯ ಅಂದದ ಮುಖವನ್ನಾಗಿ ಮಾರ್ಪಡಿಸಿಕೊಂಡಿತ್ತು. ಮೇಲ್ಮೈಯಲ್ಲಿ ಚೆಲುವೆಯ ಮುಖಚಿತ್ರವನ್ನು ಮೈಗೂಡಿಸಿಕೊಂಡು ಗಮನ ಸೆಳೆದಿತ್ತು. ಹುಳುವಿನ ಮೇಲೆ ಸುಂದರ ಯುವತಿಯ ಚಿತ್ರ ಒಡಮೂಡಿದ್ದು ಕಂಡು ಮನೆಯವರಿಗೆ ಅಚ್ಚರಿಯೋ ಅಚ್ಚರಿ.
ದೀಪಾವಳಿ ಸಮಯದಲ್ಲಿ ಹೊಸನಗರ ತಾಲ್ಲೂಕಿನ ನಾಗರಕೊಡಿಗೆ ಗ್ರಾಮದ ಎಂ.ಸಿ. ಸುಬ್ರಹ್ಮಣ್ಯ ರವರ ಮನೆಯ ಒಳಭಾಗಕ್ಕೆ ಕೀಟವೊಂದು ಹಾರಿ ಬಂದಿದೆ. ಒಳಗೆ ಸಂಪೂರ್ಣ ಹಾರಿ ಬರಲಾಗದೆ ಮನೆಯ ಟೈಲ್ಸ್ ಮೇಲೆ ತೆವಳ್ಳುತ್ತಾ ಸಾಗಿದೆ. ಆಗ ಮನೆಯೊಡತಿ ಅನ್ನಪೂರ್ಣ ಕೀಟವನ್ನು ಕಾಲಿನಲ್ಲಿ ಹೊರದೂಡಲು ಮುಂದಾದಾಗ ಅಚ್ಚರಿಯೊಂದು ಕಂಡು ಬೆರಗಾಗಿದ್ದಾರೆ.
ಹುಡುಗಿ ಚಿತ್ರ ಇರುವ ಹುಳು ಬರುತ್ತಿದೆಯೆಲ್ಲಾ, ಅರರೇ ಇದೇನಿದು..ಮನೆ ಬಾಗಿಲಿಗೆ ಬಂದ ಹುಳುವಿನ ಮೈ ಮೇಲೆ ಸುಂದರ ಯುವತಿಯ ರೂಪ ನೋಡಿ ಆಶ್ಚರ್ಯ ಪಟ್ಟಿದ್ದಾರೆ. ಕಾಗದ ಚೂರು ಅಂಟಿರಬಹುದೇನೋ ಎಂದು ಹತ್ತಿರದಿಂದ ಪರೀಕ್ಷಿಸಿದರೂ ಏನು ತಿಳಿಯದೆ ತಲೆಕೆಡಿಸಿಕೊಂಡು ನಂತರ ಮನೆಯಲ್ಲಿದ್ದ ಪಾತ್ರೆಯಿಂದ ಹುಳುವಿನ ಮೇಲೆ ಮಗ್ಗಿಸಿ ಇಟ್ಟು ಬಂದಿಸಿದ್ದಾರೆ. ಮನೆಗೆ ಬಂದವರಿಗೆಲ್ಲ ಈ ಹುಳುವಿನ ಸೌಂದರ್ಯವನ್ನು ತೋರಿಸಿ ಖುಷಿ ಪಟ್ಟಿದ್ದಾರೆ ಮಾರನೇ ದಿನ ಹುಳು ಮನುಷ್ಯ ಇಟ್ಟ ಡಬ್ಬಿಯಿಂದ ಕಣ್ಮರೆಯಾಗಿದೆ.
ಎಲೆ ಕೀಟಗಳು, ಹುಳುಗಳು ಎಲೆ ಆಕಾರ ಹೊಂದಿರುತ್ತವೆ. ಮಾವು, ಹಲಸು, ಕೌಲು ಮರದಲ್ಲಿ ಅದರ ಎಲೆಯಂತೆ ಕೀಟಗಳು ಕಾಣಿಸಿಕೊಂಡು ರಕ್ಷಣೆಯನ್ನು ಪಡೆದಿದೆ. ಗಿಡದಲ್ಲಿ ಹಸಿರೆಲೆ ಆಕಾರ ಹೊಂದಿರುವ ಎಲೆ ಕೀಟವು ತನ್ನ ಮೇಲ್ಮೈಯಲ್ಲಿ ಸುಂದರ ಯುವತಿಯ ಮುಖಚಿತ್ರದ ಚಿತ್ತಾರವನ್ನು ಮೂಡಿಸಿಕೊಂಡಿದ್ದು ಹೇಗೆ ಎಂದು ಎಂಬುದೇ ಯಕ್ಷ ಪ್ರಶ್ನೆಯಾಗಿದೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…