ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್ ಹಾಗೂ ಉಂಗುರವನ್ನು ತೆಗೆದುಕೊಂಡು ಪರಾರಿಯಾಗಿದ್ದರು.
ಈ ಘಟನೆ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನೆಲೆ ಅಂದಿನ ಡಿವೈಎಸ್ಪಿ ಓಂಕಾರ ನಾಯ್ಕ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಕುರಿತು ಸರ್ಕಾರದ ಪರ ವಕೀಲರಾದ ಪುಷ್ಪ ಮಂಡಿಸಿದ ವಾದವನ್ನು ಅಲಿಸಿದ ನ್ಯಾಯಾಧೀಶರಾದ ಬಿ.ಆರ್. ಪಲ್ಲವಿ ಅವರು ಕಲಂ 302 ಮತ್ತು ಕಲಂ7 , 25 ಶಸ್ತ್ತಾಸ್ತ್ರ ಕಾಯ್ಧೆ ಅಡಿ ಆರೋಪ ದೃಢಪಟ್ಟಿದ್ದರಿಂದ ಭುಜಂಗ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡವನ್ನು ನೀಡಿ ಆದೇಶ ನೀಡಿದೆ. ಒಂದು ವೇಳೆ ದಂಡ ಕಟ್ಟಲು ಆಗದೆ ಹೋದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆಯನ್ನು ಅನುಭವಿಸಲು ಸೂಚಿಸಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…